ನರಿಕೊಂಬು : ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ - Karavali Times ನರಿಕೊಂಬು : ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ - Karavali Times

728x90

27 February 2020

ನರಿಕೊಂಬು : ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ





ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ ಪಾಣೆಮಂಗಳೂರು ಹೋಬಳಿಯ  ನರಿಕೊಂಬು, ಶಂಭೂರು, ಪಾಣೆಮಂಗಳೂರು ಹಾಗೂ ಬಂಟ್ವಾಳ ಮೂಡ ಗ್ರಾಮಗಳ ಕಂದಾಯ ಮತ್ತು ಪಿಂಚಣಿ ಅದಾಲತ್  ಕಾರ್ಯಕ್ರಮ ನರಿಕೊಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕಂದಾಯ ಅದಾಲತ್ ನ ಮೂಲ ಉದ್ದೇಶ ಪಹಣಿ ಪತ್ರಿಕೆಯಲ್ಲಿ ಲೋಪದೋಷಗಳು ಇದ್ದರೆ ಪಹಣಿ ಸರಿಪಡಿಸುವಿಕೆ, ಪಹಣಿ ಶುದ್ಧೀಕರಣ, ಪಿಂಚಣಿಗೆ ಸಂಬಂದಿಸಿದಂತೆ ಮಾಸಾಶನ ಪಡೆಯುವ ಬಡ ಫಲಾನುಭವಿಗಳಿಗೆ ಯಾವುದೇ ರೀತಿಯ ಕುಂದುಕೊರತೆ ಬಾರದಂತೆ ನೋಡಿಕೊಳ್ಳುವ ಸಲುವಾಗಿ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿರುತ್ತದೆ. ಸಾರ್ವಜನಿಕರು ಈ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭೂಮಿ ಶಾಖೆಯ ಶಿರಸ್ತೇದಾರ್ ಶ್ರೀಧರ್ ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಶಂಭೂರು, ಜಯರಾಜ್, ರಂಜಿತ್ ನರಿಕೊಂಬು, ಆರ್.ಆರ್.ಟಿ. ಶಾಖೆಯ ರೇಖಾ, ಅಭಿವೃದ್ಧಿ ಅಧಿಕಾರಿ ಶಿವು ಜನಕೊಂಡ, ಬಿ.ಮೂಡ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪಾಣೆಮಂಗಳೂರು ಗ್ರಾಮ ಲೆಕ್ಕಾಧಿಕಾರಿ ವಿಜೇತ, ನರಿಕೊಂಬು ಗ್ರಾಮ ಲೆಕ್ಕಾಧಿಕಾರಿ ಆಥಿಕ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.









  • Blogger Comments
  • Facebook Comments

0 comments:

Post a Comment

Item Reviewed: ನರಿಕೊಂಬು : ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ Rating: 5 Reviewed By: karavali Times
Scroll to Top