ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಬೆಂಗಳೂರಿಗೆ ಬರಲೇಬಾರದು : ಸಿಎಂ ಸೂಚನೆ - Karavali Times ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಬೆಂಗಳೂರಿಗೆ ಬರಲೇಬಾರದು : ಸಿಎಂ ಸೂಚನೆ - Karavali Times

728x90

26 March 2020

ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಬೆಂಗಳೂರಿಗೆ ಬರಲೇಬಾರದು : ಸಿಎಂ ಸೂಚನೆ



ಬೆಂಗಳೂರು (ಕರಾವಳಿ ಟೈಮ್ಸ್) : ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಇಡೀ ದೇಶ ಲಾಕ್‍ಡೌನ್‍ನಲ್ಲಿರುವಾಗ ತಮ್ಮನ್ನು ಭೇಟಿ ಮಾಡುವುದಕ್ಕಾಗಲಿ, ಇಲ್ಲವೇ ಬೇರೆ ಇನ್ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು ಎಂದು ಸಿಎಂ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಮುಖ್ಯಮಂತ್ರಿವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಲು ಯಾವುದೇ ಸಾರ್ವಜನಿಕರಿಗೂ ಅವಕಾಶ ನೀಡಲಾಗಿಲ್ಲ. ಮುಖ್ಯಮಂತ್ರಿಯವರ ಕಚೇರಿಯ ಸೂಚನೆಗಳಂತೆ ಪಕ್ಷದ ಯಾವುದೇ ಮುಖಂಡರನ್ನೂ ಸಹ ಅವರ ನಿವಾಸದಲ್ಲಿ ಭೇಟಿಯಾಗಲು ಅವಕಾಶ ನೀಡದಂತೆ ಪೆÇಲೀಸರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲೇ ಉಳಿಯಬೇಕು, ಬೆಂಗಳೂರಿಗೆ ಬರಲೇಬಾರದು : ಸಿಎಂ ಸೂಚನೆ Rating: 5 Reviewed By: karavali Times
Scroll to Top