ಲಾಕ್ ಡೌನ್ ಸಮಯದಲ್ಲಿ ಮನೆ ಮನೆ ಭೇಟಿ ಮೂಲಕ ಜನರನ್ನು ಪರೀಕ್ಷಿಸಬೇಕಿದೆ : ಮಾನವ ಹಕ್ಕು ಸಂರಕ್ಷಣಾ ವೇದಿಕೆ ಅಧ್ಯಕ್ಷ ಇಕ್ಬಾಲ್ ಪರ್ಲಿಯ - Karavali Times ಲಾಕ್ ಡೌನ್ ಸಮಯದಲ್ಲಿ ಮನೆ ಮನೆ ಭೇಟಿ ಮೂಲಕ ಜನರನ್ನು ಪರೀಕ್ಷಿಸಬೇಕಿದೆ : ಮಾನವ ಹಕ್ಕು ಸಂರಕ್ಷಣಾ ವೇದಿಕೆ ಅಧ್ಯಕ್ಷ ಇಕ್ಬಾಲ್ ಪರ್ಲಿಯ - Karavali Times

728x90

24 March 2020

ಲಾಕ್ ಡೌನ್ ಸಮಯದಲ್ಲಿ ಮನೆ ಮನೆ ಭೇಟಿ ಮೂಲಕ ಜನರನ್ನು ಪರೀಕ್ಷಿಸಬೇಕಿದೆ : ಮಾನವ ಹಕ್ಕು ಸಂರಕ್ಷಣಾ ವೇದಿಕೆ ಅಧ್ಯಕ್ಷ ಇಕ್ಬಾಲ್ ಪರ್ಲಿಯ



ಬಂಟ್ವಾಳ (ಕರಾವಳಿ ಟೈಮ್ಸ್) : ಜಾಗತಿಕ ಮಹಾಮಾರಿ ಕೊರೊನಾ ವೈರಸನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ , ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜನತಾ ಕರ್ಪ್ಯೂ , ದೇಶವ್ಯಾಪಿ ಲಾಕ್ ಡೌನ್ ಘೋಷಿಸುವ ಮೂಲಕ ಮಹತ್ವಪೂರ್ಣ ಹೆಜ್ಜೆ ಇರಿಸಿದೆ. ಆದರೆ ಇದು ಎಷ್ಟೊಂದು ಪರಿಣಾಮಕಾರಿ ಫಲಿತಾಂಶ ನೋಡಬಹುದು ಅನ್ನುವುದರ ಬಗ್ಗೆ ಚಿಂತನೆ ಕೂಡ  ಮಾಡಬೇಕಾಗುತ್ತದೆ. ಯಾಕೆಂದರೆ ಕೊರೊನಾ ಖಾಯಿಲೆಯ ಬಗ್ಗೆ ಭಯಬಿದ್ದು ಇಂದು ಎಷ್ಟೋ ಜನ ಆಸ್ಪತ್ರೆಗೆ ಹೋಗುವುದಕ್ಕೂ ಹಿಂಜರಿದಿದ್ದಾರೆ. ಅದೆಷ್ಟೋ ಮಂದಿ ನೆಗಡಿ , ತಲೆನೋವು , ಜ್ವರ ಬಂದರೂ ಆಸ್ಪತ್ರೆಗೆ ಹೋಗದೆ ಮನೆಯಲ್ಲೇ ಉಳಿದುಕೊಂಡಿರುತ್ತಾರೆ. ಅದರಲ್ಲಿ ಎಷ್ಟು ಮಂದಿಗೆ ಕೊರೊನಾ ಸೋಂಕು ತಗುಲಿದೆಯೋ ಇಲ್ಲವೋ ಯಾರಿಗೂ ಗೊತ್ತಿರುವುದಿಲ್ಲ. ಆದ್ದರಿಂದ ಸರಕಾರ ಲಾಕ್ ಡೌನ್ ಮಾಡಿರುವ ಈ ಸಮಯದಲ್ಲಿ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತರು , ವೈದ್ಯರು ಮತ್ತು ನರ್ಸ್ ಗಳ ಮೂಲಕ ಮನೆ ಮನೆಗೆ ಭೇಟಿ ಮಾಡಿಸಿ ಪರೀಕ್ಷಿಸುವಂತೆ ಮಾಡಬೇಕು. ಆ ಮೂಲಕ ಪ್ರಧಾನಿಯವರ 21 ದಿನದ ಲಾಕ್ ಡೌನ್ ಕೊರೋನಾ ನಿರ್ಮೂಲನೆಗೊಳಿಸುವ ಒಂದು ಪರಿಣಾಮಕಾರಿ ಕ್ರಾಂತಿಕಾರಿ ಹೆಜ್ಜೆಯಾಗಿ ಪರಿವರ್ತಿಸಬಹುದು. ಇಲ್ಲಂದ್ರೆ ವರ್ಷಪೂರ್ತಿ ಲಾಕ್ ಡೌನ್ ಮಾಡಿದರೂ ಯಾವುದೇ ಉಪಯೋಗವಾಗದು ಎಂದು ಭಾರತೀಯ ಮಾನವ ಹಕ್ಕು ಸಂರಕ್ಷಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಕ್ಬಾಲ್ ಪರ್ಲಿಯ ಅಭಿಪ್ರಾಯಪಟ್ಟಿದ್ದಾರೆ
  • Blogger Comments
  • Facebook Comments

0 comments:

Post a Comment

Item Reviewed: ಲಾಕ್ ಡೌನ್ ಸಮಯದಲ್ಲಿ ಮನೆ ಮನೆ ಭೇಟಿ ಮೂಲಕ ಜನರನ್ನು ಪರೀಕ್ಷಿಸಬೇಕಿದೆ : ಮಾನವ ಹಕ್ಕು ಸಂರಕ್ಷಣಾ ವೇದಿಕೆ ಅಧ್ಯಕ್ಷ ಇಕ್ಬಾಲ್ ಪರ್ಲಿಯ Rating: 5 Reviewed By: karavali Times
Scroll to Top