ಅನಂತಾಡಿ : ಬಡ ಕುಟುಂಬಕ್ಕೆ ಕಿಟ್ ವಿತರಣೆ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆ - Karavali Times ಅನಂತಾಡಿ : ಬಡ ಕುಟುಂಬಕ್ಕೆ ಕಿಟ್ ವಿತರಣೆ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆ - Karavali Times

728x90

30 April 2020

ಅನಂತಾಡಿ : ಬಡ ಕುಟುಂಬಕ್ಕೆ ಕಿಟ್ ವಿತರಣೆ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆ



ವಿಟ್ಲ (ಕರಾವಳಿ ಟೈಮ್ಸ್) :  ಲಾಕ್‍ಡಾನ್‍ನಿಂದ ಸಂಕಷ್ಟ ಎದುರಿಸುತ್ತಿರುವ ಅನಂತಾಡಿ ಗ್ರಾಮದ ಬಡ ಕುಟುಂಬಗಳಿಗೆ  ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮತ್ತು ಆಶಾ ಕಾರ್ಯಕರ್ತರಿಗೆ ಗೌರವರ್ಪಣಾ ಕಾರ್ಯಕ್ರಮ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಸಲಹೆಯಂತೆ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜಯಂತಿ ವಿ. ಪೂಜಾರಿ ಅವರ ನೇತೃತ್ವದಲ್ಲಿ ಗುರುವಾರ ನಡೆಯಿತು.

ಜಯಂತಿ ವಿ. ಪೂಜಾರಿ ಅವರ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದ ಜನರಲ್ಲಿ ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸಿ ಗ್ರಾಮದ ಜನತೆಯ ಆರೋಗ್ಯಕ್ಕಾಗಿ ದುಡಿಯುತ್ತಿರುವ ಮೂವರು ಆಶಾ ಕಾರ್ಯಕರ್ತರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಗೌರವಿಸಿದರು.

ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬೇಬಿ ಕುಂದರ್, ಎ.ಪಿ.ಎಂ.ಸಿ ಅದ್ಯಕ್ಷ ಕೆ. ಪದ್ಮನಾಭ ರೈ, ಉಪಾದ್ಯಕ್ಷ ಚಂದ್ರಶೇಖರ ಪೂಜಾರಿ, ಜಿ.ಪಂ. ಸದಸ್ಯೆ ಮಂಜುಳಾ ಮಾವೆ, ಅನಂತಾಡಿ ವಲಯ ಕಾಂಗ್ರೆಸ್ ಅದ್ಯಕ್ಷ ಸತೀಶ್ ಪೂಜಾರಿ ಬಾಕಿಲ, ಪ್ರಮುಖರಾದ ನಾರಾಯಣ ಸಾಲ್ಯಾನ್, ರಂಜನ್ ಪೂಂಜಾ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಅನಂತಾಡಿ : ಬಡ ಕುಟುಂಬಕ್ಕೆ ಕಿಟ್ ವಿತರಣೆ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆ Rating: 5 Reviewed By: karavali Times
Scroll to Top