ಆಶಾ ಕಾರ್ಯಕರ್ತಗೆ ಹಲ್ಲೆ ಪ್ರಕರಣ : ಇಬ್ಬರ ದಸ್ತಗಿರಿ - Karavali Times ಆಶಾ ಕಾರ್ಯಕರ್ತಗೆ ಹಲ್ಲೆ ಪ್ರಕರಣ : ಇಬ್ಬರ ದಸ್ತಗಿರಿ - Karavali Times

728x90

3 April 2020

ಆಶಾ ಕಾರ್ಯಕರ್ತಗೆ ಹಲ್ಲೆ ಪ್ರಕರಣ : ಇಬ್ಬರ ದಸ್ತಗಿರಿ




ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದ ಆಶಾ ಕಾರ್ಯಕರ್ತೆಗೆ ಕಿನ್ನಿಬೆಟ್ಟು ಸಮೀಪದ ಕಲಾಯಿಯಲ್ಲಿ ಎಪ್ರಿಲ್ 1 ರಂದು ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಎಪ್ರಿಲ್ 1 ರಂದು ಆರೋಗ್ಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ (48) ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ  ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ  ಎಂಬವರುಗಳ ಆರೋಗ್ಯವನ್ನು ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿರುತ್ತಾರೆ. ಇದಕ್ಕೆ ಸಂಬಂಧಿಸಿ ಮರುದಿನ ವಿದೇಶದಿಂದ ಆಗಮಿಸಿರುವ ನಿತೇಶ ಎಂಬಾತನ ಸಂಬಂಧಿ ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರು ಸದರಿ ಆಶಾ ಕಾರ್ಯಕರ್ತೆಗೆ  ಮೊಬೈಲ್ ಮೂಲಕ ಕರೆಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಬಂಟ್ವಾಳ ನಗರ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಆಶಾ ಕಾರ್ಯಕರ್ತಗೆ ಹಲ್ಲೆ ಪ್ರಕರಣ : ಇಬ್ಬರ ದಸ್ತಗಿರಿ Rating: 5 Reviewed By: karavali Times
Scroll to Top