ಕಾರ್ಮಿಕರ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯಿಂದ 1 ಕೋಟಿ ರೂಪಾಯಿ ದೇಣಿಗೆ - Karavali Times ಕಾರ್ಮಿಕರ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯಿಂದ 1 ಕೋಟಿ ರೂಪಾಯಿ ದೇಣಿಗೆ - Karavali Times

728x90

3 May 2020

ಕಾರ್ಮಿಕರ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯಿಂದ 1 ಕೋಟಿ ರೂಪಾಯಿ ದೇಣಿಗೆ




ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಲಾಕ್‍ಡೌನ್‍ನಿಂದಾಗಿ ಅಲ್ಲಲ್ಲಿ ಬಾಕಿಯಾಗಿರುವ ಕಾರ್ಮಿಕರು ತಮ್ಮ ಊರಿಗೆ ಪ್ರಯಾಣಿಸಲು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶದ ಕಾಂಗ್ರೆಸ್ ವತಿಯಿಂದ ಸಾರಿಗೆ ಸಂಸ್ಥೆಗೆ 1 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ.

ನಿನ್ನೆಯಿಂದ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದ ಕಾರ್ಮಿಕರು ಬಸ್ ಪ್ರಯಾಣ ದರದ ಹೆಚ್ಚಳದಿಂದಾಗಿ ಕಂಗಾಲಾಗಿದ್ದರು. ಸರಕಾರದ ಈ ಕ್ರಮ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇದೀಗ ಕಾಂಗ್ರೆಸ್ ಮುಂದಾಗಿದ್ದು ಕೆಎಸ್‍ಆರ್‍ಟಿಸಿ ಸಂಸ್ಥೆಗೆ 1 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಉದಾರತೆ ಮೆರೆದಿದೆ.

ಲಾಕ್‍ಡೌನ್ ಸಡಿಲ ಹಿನ್ನೆಲೆಯಲ್ಲಿ ಸಾಕಷ್ಟು ಸಂಖ್ಯೆಯ ಕಾರ್ಮಿಕರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಬಸ್ ದರ ಏರಿಕೆಯಿಂದಾಗಿ ಊರಿಗೆ ತೆರಳಲಾಗದೆ ಕಂಗಾಲಾಗಿದ್ದರು. ಸರಕಾರದ ನಿರ್ಲಕ್ಷ್ಯ ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸÀರಕಾರಕ್ಕೆ ಮನವಿ ಕೂಡಾ ಮಾಡಿದ್ದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂಪಾಯಿ ಚೆಕ್ ನೀಡಿದ್ದಾರೆ.  ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ ಕೊರೋನ ಪರಿಹಾರ ನಿಧಿಗಾಗಿ ದೇಣಿಗೆ ನೀಡಿರುವ ಹಣದಿಂದ ಕೆಎಸ್‍ಆರ್‍ಟಿಸಿ ಸಂಸ್ಥೆಗೆ ನೀಡಲಾಗಿದೆ ಎನ್ನಲಾಗಿದೆ. 
  • Blogger Comments
  • Facebook Comments

0 comments:

Post a Comment

Item Reviewed: ಕಾರ್ಮಿಕರ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯಿಂದ 1 ಕೋಟಿ ರೂಪಾಯಿ ದೇಣಿಗೆ Rating: 5 Reviewed By: karavali Times
Scroll to Top