ಜೂನ್ 8 ರಿಂದ ಕಡ್ಡಾಯ ಶರತ್ತುಗಳಿಗೊಳಪಟ್ಟು ಧಾರ್ಮಿಕ ಕೇಂದ್ರಗಳು ಆರಂಭ - Karavali Times ಜೂನ್ 8 ರಿಂದ ಕಡ್ಡಾಯ ಶರತ್ತುಗಳಿಗೊಳಪಟ್ಟು ಧಾರ್ಮಿಕ ಕೇಂದ್ರಗಳು ಆರಂಭ - Karavali Times

728x90

31 May 2020

ಜೂನ್ 8 ರಿಂದ ಕಡ್ಡಾಯ ಶರತ್ತುಗಳಿಗೊಳಪಟ್ಟು ಧಾರ್ಮಿಕ ಕೇಂದ್ರಗಳು ಆರಂಭ




ಬೆಂಗಳೂರು (ಕರಾವಳಿ ಟೈಮ್ಸ್) : ಜೂನ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಿರುವ ಕೇಂದ್ರ ಸರಕಾರ ಕೆಲವೊಂದು ವಿನಾಯಿತಿಗಳನ್ನು ಘೋಷಿಸಿ ಮಾರ್ಗಸೂಚಿ ಪ್ರಕಟಿಸಿದೆ. ಪರಿಷ್ಕøತ ಮಾರ್ಗಸೂಚಿಯಂತೆ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ.

ಆರಂಭದಲ್ಲಿ ಜೂನ್ 1 ರಂದು ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರಕಾರ ಆದೇಶ ನೀಡಿತ್ತು. ಇದರಂತೆ ಧಾರ್ಮಿಕ ಕ್ಷೇತ್ರಗಳ ಮುಖಂಡರು ಕೇಂದ್ರಗಳನ್ನು ಸ್ವಚ್ಛ ಮಾಡಿ ತೆರೆಯಲು ಸಿದ್ದಪಡಿಸಲಾಗಿತ್ತು.  ಆದರೆ ಕೇಂದ್ರ ಸರಕಾರ ಜೂನ್ 1 ರ ಬದಲಾಗಿ ಜೂನ್ 8 ರಿಂದ ದೇವಾಲಯಗಳನ್ನು ತೆರೆಯುವಂತೆ ಆದೇಶ ಹೊರಡಿಸಿದೆ. ಈ ಸಂಬಂಧ ಈ ವಾರವೇ ಸರಕಾರ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಮಸೀದಿ, ಮಂದಿರ, ಚರ್ಚ್‍ಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

ದೇವಸ್ಥಾನದಲ್ಲಿ ಶರತ್ತುಗಳು?


* ಪ್ರತಿದಿನ ದೇವಾಲಯದ ಒಳಗೆ ಹಾಗೂ ಹೊರಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಬೇಕು
* ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು
* ಪ್ರತಿಯೊಬ್ಬರಿಗೂ ಥರ್ಮಲ್ ಸ್ಯ್ಕಾನಿಂಗ್ ಮಾಡಬೇಕು
* ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಡಬೇಕು
* ಜನರನ್ನು ನಿಯಂತ್ರಿಸಲು ಹೆಚ್ಚಿನ ಸಿಬ್ಬಂದಿ ಬೇಕಾದ್ರೆ ದೇವಸ್ಥಾನದ ಖರ್ಚಿನಲ್ಲಿ ನೇಮಕಾತಿ ಮಾಡಿಕೊಳ್ಳಬೇಕು
* ದೇವಸ್ಥಾನಗಳನ್ನು ತೆರೆಯಲು ಸಮಯ ನಿಗದಿ ಸಾಧ್ಯತೆ
* ಅರ್ಚಕರು, ಸಿಬ್ಬಂದಿ ಅಗತ್ಯಕ್ಕಿಂತ ಹೆಚ್ಚಾಗಿದ್ದರೆ, ಶೇ.50 ರಷ್ಟು ಹಾಜರಿ
* ಭಕ್ತರು ಕೊಡುವ ಕಾಣಿಕೆ, ಹರಕೆ ವಸ್ತು, ಹೂ ಹಣ್ಣು ಸ್ವೀಕಾರಕ್ಕೆ ಪ್ರತ್ಯೇಕ ಸ್ಥಳ
* ದಿನಕ್ಕೆ ಎರಡರಿಂದ ಮೂರು ಸಲ ಇಡೀ ದೇವಸ್ಥಾನ ಸ್ಯಾನಿಟೈಸ್

ಮಸೀದಿಯಲ್ಲಿ ಷರತ್ತುಗಳು?

* ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ವುಝೂ ಅಂದ್ರೆ ಅಂಗಶುದ್ದಿ ಮಾಡಿ ಮಸೀದಿಗೆ ಬರಬೇಕು
* ಮಸೀದಿಗಳಲ್ಲಿ ಕೈಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು. ಅದರ ಬದಲು ಟ್ಯಾಪ್ ಬಳಸಬೇಕು
* ಮಸೀದಿಗಳಲ್ಲಿ ಒಂದೇ ಆಗಮನ-ನಿರ್ಗಮನ ದ್ವಾರ ಇರಬೇಕು
* ಪ್ರತಿ ಪ್ರಾರ್ಥನೆ ಮುನ್ನ ಮಸೀದಿಯ ಹಾಲ್ ಶುಚಿಗೊಳಿಸಬೇಕು
* ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು
* ಪ್ರಾರ್ಥನೆ ವೇಳೆ 1 ರಿಂದ 2 ಮೀಟರ್ ಅಂತರ ಕಾಯಬೇಕು
* ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
* ಕಡ್ಡಾಯ ನಮಾಜನ್ನು 10-15 ನಿಮಷಕ್ಕೆ ಸೀಮಿತಗೊಳಿಸಬೇಕು
* ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್‍ಗೆ ವ್ಯವಸ್ಥೆ ಕಲ್ಪಿಸಬೇಕು
* ಸುನ್ನತ್ ನಮಾಜನ್ನು ಮನೆಯಲ್ಲೇ ಮಾಡಬೇಕು
* ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
* ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
* ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
* ದರ್ಗಾದಲ್ಲಿನ ಸಮಾಧಿಗಳೆದುರು ಕೂತು ಪ್ರಾರ್ಥನೆ ಮಾಡಬಾರದು
* ಆಲಿಂಗನ, ಹಸ್ತಲಾಘವಕ್ಕೆ ನಿರ್ಬಂಧ

ಚರ್ಚ್‍ಗಳಲ್ಲಿ ಶರತ್ತು?

* ಚರ್ಚ್‍ನಲ್ಲಿ ಭಕ್ತರ ಸಂಖ್ಯೆಗೆ ಮಿತಿ ಹೇರಿಕೆ ಸಾಧ್ಯತೆ
* ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ
* ಇನ್ನೂ ದಿನದ ನಿರ್ದಿಷ್ಟ ಸಮಯಗಳಲ್ಲಿ ಮಾತ್ರ ಚರ್ಚ್ ತೆರೆಯಲು ಅವಕಾಶ ಸಾಧ್ಯತೆ
* ಪ್ರಾರ್ಥನೆ ಬಳಿಕ ಚರ್ಚ್ ಒಳಗೆ ಸ್ವಚ್ಛಗೊಳಿಸೋದು ಕಡ್ಡಾಯ
* ಯಾವುದೇ ಕಾರಣಕ್ಕೂ ಜನಜಾತ್ರೆ ಆಗದಂತೆ ಕಟ್ಟುನಿಟ್ಟಿನ ಕ್ರಮ
  • Blogger Comments
  • Facebook Comments

0 comments:

Post a Comment

Item Reviewed: ಜೂನ್ 8 ರಿಂದ ಕಡ್ಡಾಯ ಶರತ್ತುಗಳಿಗೊಳಪಟ್ಟು ಧಾರ್ಮಿಕ ಕೇಂದ್ರಗಳು ಆರಂಭ Rating: 5 Reviewed By: karavali Times
Scroll to Top