ಸರಪಾಡಿ : ಜಾನುವಾರು ಸಾಗಾಟ ಪತ್ತೆ ಹಚ್ಚಿ ಚಾಲಕನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಸರಪಾಡಿ : ಜಾನುವಾರು ಸಾಗಾಟ ಪತ್ತೆ ಹಚ್ಚಿ ಚಾಲಕನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

21 June 2020

ಸರಪಾಡಿ : ಜಾನುವಾರು ಸಾಗಾಟ ಪತ್ತೆ ಹಚ್ಚಿ ಚಾಲಕನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು



ಬಂಟ್ವಾಳ (ಕರಾವಳಿ ಟೈಮ್ಸ್) : ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ನೇತೃತ್ವದ ಪೊಲೀಸರು ತಾಲೂಕಿನ ಸರಪಾಡಿಯಲ್ಲಿ ಬೇಧಿಸಿ ಪಿಕಪ್ ಚಾಲಕನ ಮುಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಿದ್ದಾರೆ.

ಮಂಗಳೂರು ತಾಲೂಕು, ಕಣ್ಣೂರು-ಬಿರ್ಪುಗುಡ್ಡೆ ನಿವಾಸಿ ಇಬ್ರಾಹಿಂ ಎಂಬವರು ಕೊಟ್ಟುಂಜ ಬಾಲಕೃಷ್ಣ ಪೂಜಾರಿ ಅವರಿಂದ ಜಾನುವಾರುಗಳನ್ನು ಖರೀದಿಸಿ ಮುಹಮ್ಮದ್ ಹನೀಫ್ ಅವರ ಪಿಕಪ್ ವಾಹನದಲ್ಲಿ ಪರವಾನಿಗೆ ರಹಿತವಾಗಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಪೆÇಲೀಸರು ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ದಾಳಿ ವೇಳೆ ಪೊಲೀಸರು 10,500 ರೂಪಾಯಿ ಮೌಲ್ಯದ ಒಂದು ದನ, ಹೋರಿ, ಗಂಡು ಕರು ಹಾಗೂ ಒಂದು ಹೆಣ್ಣು ಕರು ಸಹಿತ 2 ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.









  • Blogger Comments
  • Facebook Comments

0 comments:

Post a Comment

Item Reviewed: ಸರಪಾಡಿ : ಜಾನುವಾರು ಸಾಗಾಟ ಪತ್ತೆ ಹಚ್ಚಿ ಚಾಲಕನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top