ಎಸ್.ಡಿ.ಎಂ.ಸಿ. ಹಾಗೂ ವಿದ್ಯಾರ್ಥಿ ಪೋಷಕರೊಂದಿಗೆ ಚರ್ಚಿಸಿ ಶಾಲೆ ಪುನಾರಂಭದ ಬಗ್ಗೆ ತೀರ್ಮಾನ : ಸಚಿವ ಸುರೇಶ್ ಕುಮಾರ್ - Karavali Times ಎಸ್.ಡಿ.ಎಂ.ಸಿ. ಹಾಗೂ ವಿದ್ಯಾರ್ಥಿ ಪೋಷಕರೊಂದಿಗೆ ಚರ್ಚಿಸಿ ಶಾಲೆ ಪುನಾರಂಭದ ಬಗ್ಗೆ ತೀರ್ಮಾನ : ಸಚಿವ ಸುರೇಶ್ ಕುಮಾರ್ - Karavali Times

728x90

2 June 2020

ಎಸ್.ಡಿ.ಎಂ.ಸಿ. ಹಾಗೂ ವಿದ್ಯಾರ್ಥಿ ಪೋಷಕರೊಂದಿಗೆ ಚರ್ಚಿಸಿ ಶಾಲೆ ಪುನಾರಂಭದ ಬಗ್ಗೆ ತೀರ್ಮಾನ : ಸಚಿವ ಸುರೇಶ್ ಕುಮಾರ್



ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸಾಧಕ-ಬಾಧಕಗಳ ಕುರಿತು ಪ್ರತಿ ಶಾಲಾ ಮಟ್ಟದಲ್ಲಿ ಪೆÇೀಷಕರು ಮತ್ತು ಸಂಬಂಧಿಸಿದ ಪಾಲುದಾರರ ಸಭೆಗಳನ್ನು ಆಯೋಜಿಸಿ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದ್ದು, ಸಭೆಯ ನಿರ್ಣಯಗಳನ್ನು ಪರಿಶೀಲನೆ ನಡೆಸಿ ಬಳಿಕ ಶಾಲಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಸರಕಾರ ಮೇ 30 ರಂದು ಹೊರಡಿಸಿರುವ ಮಾರ್ಗಸೂಚಿಯಂತೆ ಶಾಲೆಗಳ ಪುನರಾರಂಭಕ್ಕೆ ಸೂಕ್ತ ಸಮಾಲೋಚನೆ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಇದೇ ತಿಂಗಳ 10 ರಿಂದ 12ರ ಒಳಗಾಗಿ ಪೆÇೀಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನ, ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಚರ್ಚೆ ನಡೆಸಿ ಸರ್ಕಾರಕ್ಕೆ ಅಭಿಪ್ರಾಯ ತಿಳಿಸುವಂತೆ ಮುಖ್ಯೋಪಧ್ಯಾಯರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಎಸ್.ಡಿ.ಎಂ.ಸಿ. ಹಾಗೂ ವಿದ್ಯಾರ್ಥಿ ಪೋಷಕರೊಂದಿಗೆ ಚರ್ಚಿಸಿ ಶಾಲೆ ಪುನಾರಂಭದ ಬಗ್ಗೆ ತೀರ್ಮಾನ : ಸಚಿವ ಸುರೇಶ್ ಕುಮಾರ್ Rating: 5 Reviewed By: karavali Times
Scroll to Top