ಆನ್‍ಲೈನ್ ಶಿಕ್ಷಣ ದಂಧೆ ನಿಲ್ಲಿಸಲು ಸಚಿವ ಸುರೇಶ್ ಕುಮಾರ್‍ಗೆ ಸಿದ್ದರಾಮಯ್ಯ ಆಗ್ರಹ - Karavali Times ಆನ್‍ಲೈನ್ ಶಿಕ್ಷಣ ದಂಧೆ ನಿಲ್ಲಿಸಲು ಸಚಿವ ಸುರೇಶ್ ಕುಮಾರ್‍ಗೆ ಸಿದ್ದರಾಮಯ್ಯ ಆಗ್ರಹ - Karavali Times

728x90

9 June 2020

ಆನ್‍ಲೈನ್ ಶಿಕ್ಷಣ ದಂಧೆ ನಿಲ್ಲಿಸಲು ಸಚಿವ ಸುರೇಶ್ ಕುಮಾರ್‍ಗೆ ಸಿದ್ದರಾಮಯ್ಯ ಆಗ್ರಹ



ಬೆಂಗಳೂರು (ಕರಾವಳಿ ಟೈಮ್ಸ್) : ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಶಿಕ್ಷಣವನ್ನು ಕೂಡಾ ದುಡ್ಡು ಮಾಡುವ ಹೊಸ ದಂಧೆಯಾಗಿ ಮಾಡಿಕೊಂಡಿವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪ್ರಾಥಮಿಕ ಹಂತದಲ್ಲಿಯೇ ಶುರುವಾಗಿರುವ ಹಾವಳಿಯನ್ನು ಈ ಹಂತದಲ್ಲಿಯೇ ನಿಯಂತ್ರಿಸುವ ಕೆಲಸಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಮುಂದಾಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕ ಹೆಚ್ಚಿಸಿ, ವಿದ್ಯಾರ್ಥಿಗಳಿಂದ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ತಕ್ಷಣ ಇತ್ತ ಗಮನಹರಿಸಿ ಶಿಕ್ಷಣ ಸಂಸ್ಥೆಗಳ ಲೂಟಿಯನ್ನು ನಿಲ್ಲಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಆನ್‍ಲೈನ್ ಶಿಕ್ಷಣ ದಂಧೆ ನಿಲ್ಲಿಸಲು ಸಚಿವ ಸುರೇಶ್ ಕುಮಾರ್‍ಗೆ ಸಿದ್ದರಾಮಯ್ಯ ಆಗ್ರಹ Rating: 5 Reviewed By: karavali Times
Scroll to Top