ಸಾರ್ವಜನಿಕ ಜುಗಾರಿ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ : ಐವರ ದಸ್ತಗಿರಿ - Karavali Times ಸಾರ್ವಜನಿಕ ಜುಗಾರಿ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ : ಐವರ ದಸ್ತಗಿರಿ - Karavali Times

728x90

25 July 2020

ಸಾರ್ವಜನಿಕ ಜುಗಾರಿ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ : ಐವರ ದಸ್ತಗಿರಿ







ಬೆಳ್ತಂಗಡಿ (ಕರಾವಳಿ ಟೈಮ್ಸ್) : ಇಲ್ಲಿನ ಠಾಣಾ ವ್ಯಾಪ್ತಿಯ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಶನಿವಾರ ಸಾರ್ವಜನಿಕವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಐದು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

  ಬಂಧಿತ ಆರೋಪಿಗಳನ್ನು ಗುರುವಾಯನಕೆರೆ ನಿವಾಸಿ ಫಾರೂಕ್, ಪಣೆಜಾಲು ನಿವಾಸಿ ಪ್ರಸನ್ನ, ಬೆಳಾಲು ನಿವಾಸಿ  ಯಾಕೂಬ್, ಗೋವಿಂದೂರು ನಿವಾಸಿ ಸುಧಾಕರ ಶೆಟ್ಟಿ ಹಾಗೂ ಜಾರಿಗೆಬೈಲ್ ನಿವಾಸಿ ರೋಹಿತ್ ಎಂದು ಹೆಸರಿಸಲಾಗಿದೆ. ಇತರ ನಾಲ್ಕು ಮಂದಿ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 ಬಂಧಿತ ಆರೋಪಿಗಳಿಂದ 1,03,370/- ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








  • Blogger Comments
  • Facebook Comments

0 comments:

Post a Comment

Item Reviewed: ಸಾರ್ವಜನಿಕ ಜುಗಾರಿ ಅಡ್ಡೆಗೆ ಬೆಳ್ತಂಗಡಿ ಪೊಲೀಸರ ದಾಳಿ : ಐವರ ದಸ್ತಗಿರಿ Rating: 5 Reviewed By: karavali Times
Scroll to Top