ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ : ನೂತನ ಆಯುಕ್ತರಾಗಿ ಕಮಲ್ ಪಂಥ್ - Karavali Times ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ : ನೂತನ ಆಯುಕ್ತರಾಗಿ ಕಮಲ್ ಪಂಥ್ - Karavali Times

728x90

31 July 2020

ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ : ನೂತನ ಆಯುಕ್ತರಾಗಿ ಕಮಲ್ ಪಂಥ್



ಬೆಂಗಳೂರು (ಕರಾವಳಿ ಟೈಮ್ಸ್) :
ಕಳೆದ ಕೆಲ ದಿನಗಳಿಂದ ವರ್ಗಾವಣೆ ಸುದ್ದಿ ಕೇಳಿ ಬರುತ್ತಿದ್ದ ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ಅವರನ್ನು ಕೊನೆಗೂ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರಿಂದ ತೆರವಾದ ಸ್ಥಾನಕ್ಕೆ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನೇಮಕ ಮಾಡಲಾಗಿದೆ.

    ಭಾಸ್ಕರ್ ರಾವ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.  ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂಥ್ ಅವರನ್ನು ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕ ಮತ್ತು ಬೆಂಗಳೂರು ನಗರ ಪೆÇಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಅಪರಾಧ ತನಿಖಾ ವಿಭಾಗ ಮತ್ತು ಆರ್ಥಿಕ ಅಪರಾಧಗಳ ಹೆಚ್ಚುವರಿ ಪೆÇಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ ಅವರನ್ನು ಕಮಲ್ ಪಂಥ್ ಅವರ ವರ್ಗಾವಣೆಯಿಂದ ತೆರವಾದ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

    ಭಾಸ್ಕರ್ ರಾವ್ ಅವರನ್ನು ವರ್ಗಾಯಿಸಲು ಹಲವು ದಿನಗಳಿಂದ ತೆರೆಮರೆಯ ಕಸರತ್ತು ನಡೆಯುತ್ತಿರುವ ಬಗ್ಗೆ ಸುದ್ದಿಗಳು ಕೇಳಿ ಬಂದಿತ್ತು. ಇದೀಗ ಸರಕಾರ ಅಧಿಕೃತ ಆದೇಶ ಹೊರಬಿದ್ದಿದೆ.









  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ : ನೂತನ ಆಯುಕ್ತರಾಗಿ ಕಮಲ್ ಪಂಥ್ Rating: 5 Reviewed By: karavali Times
Scroll to Top