ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ : ನೇಪಾಳ ಪ್ರಧಾನಿ ಉವಾಚ - Karavali Times ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ : ನೇಪಾಳ ಪ್ರಧಾನಿ ಉವಾಚ - Karavali Times

728x90

13 July 2020

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ : ನೇಪಾಳ ಪ್ರಧಾನಿ ಉವಾಚ



ಕಠ್ಮಂಡು (ಕರಾವಳಿ ಟೈಮ್ಸ್) : ಹಿಂದೂಗಳ ಆರಾಧ್ಯ ದೇವ ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ. ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ  ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ನಡೆದ ಸಾಂಸ್ಕ್ರೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು, ಭಾರತ ಸಾಂಸ್ಕೃತಿಕ ದಬ್ಬಾಳಿಕೆ ಮತ್ತು ಅತಿಕ್ರಮಣದ ಮನೋಭಾವ ಹೊಂದಿದೆ ಎಂದು ಹೇಳಿದರು. ಭಾರತದಿಂದಾಗಿಯೇ ವಿಜ್ಞಾನಕ್ಕೆ ನೇಪಾಳ ನೀಡಿದ್ದ ಕೊಡುಗೆಯನ್ನು ನಗಣ್ಯವಾಗಿ ನೋಡಲಾಗುತ್ತಿದೆ. ಈಗಲೂ ರಾಮನಿಗಾಗಿ ನೇಪಾಳ ಸೀತೆಯನ್ನು ನೀಡಿದೆ ಎಂದು ನಂಬಿದ್ದಾರೆ. ಆದರೆ ನಿಜಾಂಶವೇನು ಎಂದರೆ ಶ್ರೀರಾಮನನ್ನು ನೀಡಿದ್ದೂ ಕೂಡ ನೇಪಾಳವೇ. ಶ್ರೀರಾಮ ಭಾರತೀಯನಲ್ಲ. ಆತ ನೇಪಾಳಿ. ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದವರು ಹೇಳಿದ್ದಾರೆ.

ನೇಪಾಳ ರಾಜಧಾನಿ ಕಠ್ಮಂಡುವಿನಿಂದ ಸುಮಾರು 135 ಕಿ.ಮೀ. ದೂರದಲ್ಲಿ ಬಿರ್ಗುಂಜ್ ಜಿಲ್ಲೆಯಿದ್ದು ಇಲ್ಲಿಯೇ ಶ್ರೀರಾಮ ಜನಿಸಿದ ನಿಜವಾದ ಅಯೋಧ್ಯೆ ಇದೆ. ನಾವು ಸಾಂಸ್ಕೃತಿಕವಾಗಿ ತುಳಿತಕ್ಕೊಳಗಾಗಿದ್ದು, ಭಾರತ ಸತ್ಯಾಂಶಗಳನ್ನು ಅತಿಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

 ಈ ಹಿಂದೆಯೂ ಕೂಡ ಗಡಿ ವಿಚಾರವಾಗಿ ತಗಾದೆ ತೆಗೆದಿದ್ದ ಕೆಪಿ ಶರ್ಮಾ ಒಲಿ, ಭಾರತ ಭೂ ಪ್ರದೇಶವನ್ನು ತಮ್ಮದೆಂದು ಹೇಳಿದ್ದರು. ಅಲ್ಲದೆ ಭಾರತ ಭೂಪ್ರದೇಶವನ್ನು ನೇಪಾಳದ್ದು ಎಂದು ಹೇಳುವ ನಕ್ಷೆಯನ್ನೂ ಕೂಡ ನೇಪಾಳದ ಸಂಸತ್ ನಲ್ಲಿ ಮಂಡಿಸಿ ಅನುಮೋದನೆ ಕೂಡ ಪಡೆದುಕೊಂಡಿದ್ದರು.








  • Blogger Comments
  • Facebook Comments

2 comments:

  1. He is mad? Nana shrilanka la avle undund panve

    ReplyDelete
  2. ರಾಮ ಸರ್ವಾಂತರ್ಯಾಮಿ ಎಲ್ಲಿಯೂ ಇರುತ್ತಾನೆ.ಆಯೋದ್ಯೆ ಒಂದೇ ಅದು ಭಾರತ ದಲ್ಲಿ

    ReplyDelete

Item Reviewed: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ : ನೇಪಾಳ ಪ್ರಧಾನಿ ಉವಾಚ Rating: 5 Reviewed By: karavali Times
Scroll to Top