ಈ ಬಾರಿಯು ವಿದ್ಯಾರ್ಥಿನಿಯರದ್ದೇ ಮೇಲುಗೈ.... ಚಿತ್ರದುರ್ಗ, ರಾಯಚೂರು ಹಾಗೂ ವಿಜಯಪುರ ಕೊನೆಯ ಮೂರು ಸ್ಥಾನಗಳಿಗೆ ತೃಪ್ತಿ
ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ ಶೇಕಡಾ 54.77. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಕಳುಹಿಸಲಾಗಿದೆ. ಅಲ್ಲದೆ ಇಲಾಖೆಯ ವೆಬ್ ಸೈಟ್ http://karresults.nic.in ನಲ್ಲಿ ಪ್ರಕಟಿಸಲಾಗಿದೆ.
ಶೇಕಡಾ 90.71 ಫಲಿತಾಂಶ ಪಡೆಯುವುದರೊಂದಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮೊದಲ ಸ್ಥಾನದಲ್ಲಿ, ಶೇಕಡಾ 81.53 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇಕಡಾ 56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಲ್ಲಿವೆ.
0 comments:
Post a Comment