ಅನುದಾನರಹಿತ ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಸಹಾಯಧನ ವಿತರಣೆ - Karavali Times ಅನುದಾನರಹಿತ ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಸಹಾಯಧನ ವಿತರಣೆ - Karavali Times

728x90

10 August 2020

ಅನುದಾನರಹಿತ ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಸಹಾಯಧನ ವಿತರಣೆ

 

ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಅನುದಾನ ರಹಿತ ಶಾಲೆಯ 40 ಶಿಕ್ಷಕರು ಹಾಗೂ 83 ಅಡುಗೆ ಸಿಬ್ಬಂದಿಗಳಿಗೆ ಸಹಾಯಧನವನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಸೋಮವಾರ ಹಸ್ತಾಂತರಿಸಿದರು. 

ಈ ಸಂದರ್ಭ ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಉಪನಿರ್ದೇಶಕ ಮಲ್ಲೇಸ್ವಾಮಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಾಲೂಕು ಸಂಪನ್ಮೂಲ ಕೇಂದ್ರದ ಮುಖ್ಯಸ್ಥ ರಾಧಾಕೃಷ್ಣ ಭಟ್, ಬಿ.ಆರ್.ಪಿ ರಾಘವೇಂದ್ರ ಬಳ್ಳಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಸುಪಾರಿಡೆಂಟ್ ಹರ್ಷೇಂದ್ರ, ಬಂಟ್ವಾಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ದ.ಕ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷ ಸ್ಟ್ಯಾನಿ ತಾವ್ರೋ, ತಾಲೂಕು ಸಂಘದ ಕೋಶಾಧಿಕಾರಿ ಧನ್‍ರಾಜ್, ಉಪಾಧ್ಯಕ್ಷರಾದ ಹರಿಪ್ರಸಾದ್, ಜಯಪ್ರಕಾಶ್, ಸದಸ್ಯ ಭಾಸ್ಕರ್ ರಾವ್ ಮೊದಲಾದವರು ಉಪಸ್ಥಿತರಿದ್ದರು.






  • Blogger Comments
  • Facebook Comments

0 comments:

Post a Comment

Item Reviewed: ಅನುದಾನರಹಿತ ಶಾಲಾ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗೆ ಸಹಾಯಧನ ವಿತರಣೆ Rating: 5 Reviewed By: karavali Times
Scroll to Top