ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪುಟ್ಟ ಮಗು - Karavali Times ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪುಟ್ಟ ಮಗು - Karavali Times

728x90

7 August 2020

ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪುಟ್ಟ ಮಗು

 


ತಿರುವನಂತಪುರಂ (ಕರಾವಳಿ ಟೈಮ್ಸ್) : ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ದುರಂತದಲ್ಲಿ ಪುಟ್ಟ ಮಗುವೊಂದು ಬದುಕುಳಿದಿದೆ.


ವಿಮಾನ ಭೀಕರ ದುರಂತಕ್ಕೀಡಾದ ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿಗೆ ಪುಟ್ಟ ಮಗುವೊಂದು ಅಳುತ್ತಿರುವ ಶಬ್ದ ಕೇಳಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮಗುವಿನ ಅಳು ಕೇಳುತ್ತಿರುವ ಕಡೆ ತೆರಳಿ ರಕ್ಷಿಸಿದ್ದಾರೆ. ಘಟನೆಯಿಂದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಂಡ್ರೊಟ್ಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.


 ಸಿವಿಲ್ ಪೊಲಿಸ್ ಅಧಿಕಾರಿಯೊಬ್ಬರು ಮಗುವನ್ನು ಹಿಡಿದ ಫೋಟೋದೊಂದಿಗೆ ಆಡಿಯೋ ಬಿಡುಗಡೆ ಮಾಡಿದ್ದು, ಇದೀಗ ವೈರಲ್ ಆಗಿದೆ.


 ದುಬೈನಿಂದ ಬಂದ ವಿಮಾನ ಇಲ್ಲಿ ಅವಘಡಕ್ಕೆ ತುತ್ತಾಗಿದೆ. ಘಟನೆಯಲ್ಲಿ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಮಗುವಿಗೆ ಯಾರೂ ಇಲ್ಲ. ಮಗುವನ್ನು ಆಸ್ಪತ್ರೆಗೆ ದಾಖಲಿಸುವುದಾಗಿ ಅಧಿಕಾರಿ ತಿಳಿಸಿದ್ದಾರೆ.


ಶುಕ್ರವಾರ ಸಂಜೆ 7.45ರ ವೇಳೆಗೆ ದುಬೈನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.



  • Blogger Comments
  • Facebook Comments

0 comments:

Post a Comment

Item Reviewed: ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪುಟ್ಟ ಮಗು Rating: 5 Reviewed By: karavali Times
Scroll to Top