ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು - Karavali Times ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು - Karavali Times

728x90

1 August 2020

ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು




ಬಂಟ್ವಾಳ (ಕರಾವಳಿ ಟೈಮ್ಸ್) :
ತಾಲೂಕಿನ ಮಂಚಿ ಮಸೀದಿ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ಸಮೀಪದ ದಂಡೆಮಾರ್ ನಿವಾಸಿ ಆದಂ ಎಂಬವರ ಪುತ್ರ ಉನೈಸ್ (18) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಮೃತಪಟ್ಟಿದ್ದಾನೆ.

    ಬಕ್ರೀದ್ ಹಬ್ಬವಾದ ಶುಕ್ರವಾರದ ದಿನ ತನ್ನ ಬೈಕಿನಲ್ಲಿ ತೆರಳುತ್ತಿದ್ದ ಯುವಕ ಉನೈಸ್ ಮಂಚಿ ಮಸೀದಿ ಮುಂಭಾಗ ಲಾರಿಯೊಂದನ್ನು ಓವರ್‍ಟೇಕ್ ಮಾಡುತ್ತಿದ್ದ ವೇಳೆ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಬಳಿಕ ಲಾರಿಗೂ ಡಿಕ್ಕಿಯಾದ ಬೈಕ್‍ನಿಂದ ಉನೈಸ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ. ತಕ್ಷಣ ಸ್ಥಳೀಯರು ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಉನೈಸ್ ಶನಿವಾರ ಮುಂಜಾನೆ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






  • Blogger Comments
  • Facebook Comments

0 comments:

Post a Comment

Item Reviewed: ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Rating: 5 Reviewed By: karavali Times
Scroll to Top