ನ್ಯಾಯಾಂಗ ನಿಂದನೆ ಪ್ರಕರಣ : ಹಿರಿಯ ವಕೀಲ ಪ್ರಶಾಂತ್ ಭೂಷಣ್‍ಗೆ ಒಂದು ರೂಪಾಯಿ ದಂಡ ವಿಧಿಸಿದ ಸರ್ವೋಚ್ಛ ನ್ಯಾಯಾಲಯ - Karavali Times ನ್ಯಾಯಾಂಗ ನಿಂದನೆ ಪ್ರಕರಣ : ಹಿರಿಯ ವಕೀಲ ಪ್ರಶಾಂತ್ ಭೂಷಣ್‍ಗೆ ಒಂದು ರೂಪಾಯಿ ದಂಡ ವಿಧಿಸಿದ ಸರ್ವೋಚ್ಛ ನ್ಯಾಯಾಲಯ - Karavali Times

728x90

31 August 2020

ನ್ಯಾಯಾಂಗ ನಿಂದನೆ ಪ್ರಕರಣ : ಹಿರಿಯ ವಕೀಲ ಪ್ರಶಾಂತ್ ಭೂಷಣ್‍ಗೆ ಒಂದು ರೂಪಾಯಿ ದಂಡ ವಿಧಿಸಿದ ಸರ್ವೋಚ್ಛ ನ್ಯಾಯಾಲಯ



ನವದೆಹಲಿ (ಕರಾವಳಿ ಟೈಮ್ಸ್) : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯ ವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿರುವ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. 

ಸೆಪ್ಟೆಂಬರ್ 15ರೊಳಗೆ ಸುಪ್ರೀಂಕೋರ್ಟ್ ರಿಜಿಸ್ಟ್ರಾರ್‍ಗೆ ದಂಡ ಪಾವತಿಸಬೇಕು. ತಪ್ಪಿದಲ್ಲಿ ಮೂರು ತಿಂಗಳು ಜೈಲು ಶಿಕ್ಷೆ ಮತ್ತು ಮೂರು ತಿಂಗಳು ಕೋರ್ಟ್ ಕಲಾಪಗಳಿಂದ ನಿರ್ಬಂಧಿಸುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. 

ದೇಶದ  ಅತ್ಯುನ್ನತ ನ್ಯಾಯ ವ್ಯವಸ್ಥೆಯ ಕಾರ್ಯಕ್ಷಮತೆ, ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯ ಮೂರ್ತಿಗಳು ನೀಡಿರುವ ತೀರ್ಪುಗಳಿಗೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಮಾಡಿರುವ ಎರಡು ಟ್ವೀಟ್‍ಗಳು ವಿವಾದಾಸ್ಪದವಾಗಿದ್ದು, ಇವುಗಳ ಬಗ್ಗೆ ಸುಪ್ರೀಂ ಕೋರ್ಟ್ ತಾನಾಗಿಯೇ ನ್ಯಾಯಾಂಗನಿ£ಂದನೆ ಪ್ರಕರಣ  ದಾಖಲಿಸಿಕೊಂಡು, ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ನಂತರ ಅವರಿಗೆ ಕ್ಷಮೆ ಕೇಳಲು ಸಮಯಾವಕಾಶ ನೀಡಲಾಗಿತ್ತು. ಆದರೆ, ಎರಡೆರಡು ಬಾರಿ ಅವಕಾಶ ನಿಡಿದ್ದರೂ ಅವರು ಕ್ಷಮೆ ಕೇಳಲು ನಿರಾಕರಿಸಿದ್ದರು. ತಾವು ಮಾಡಿದ ನ್ಯಾಯಾಂಗ ನಿಂದನೆ ಟ್ವೀಟ್ ಕುರಿತು ಕೋರ್ಟ್ ಯಾವುದೇ ಶಿಕ್ಷೆ ನೀಡಲಿ, ಅನುಭವಿಸುತ್ತೇನೆ. ಆದರೆ ಕ್ಷಮೆಯಾಚಿಸುವುದಿಲ್ಲ ಎಂದು  63 ವರ್ಷದ ಪ್ರಶಾಂತ್ ಭೂಷಣ್ ಹೇಳಿದ್ದರು. 

ಪ್ರಶಾಂತ್ ಭೂಷಣ್ ಅವರ ಪರ ವಾದಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್ ಅವರು, ಪ್ರಶಾಂತ್ ಭೂಷಣ್ ಅವರನ್ನು ಶಿಕ್ಷೆಗೊಳಪಡಿಸುವ ತೀರ್ಪನ್ನು ಮರು ಪರಿಶೀಲಿಸಬೇಕು ಹಾಗೂ ಅವರಿಗೆ ಯಾವುದೇ ಶಿಕ್ಷೆ ವಿಧಿಸಬಾರದು. ಭೂಷಣ್ ಅವರ ಪ್ರಕರಣವನ್ನು ಮುಚ್ಚುವುದು ಮಾತ್ರವಲ್ಲ, ವಿವಾದವನ್ನೇ ಅಂತ್ಯಗೊಳಿಸುವ ಮೂಲಕ ನ್ಯಾಯಾಲಯ ಉತ್ತಮ ಸಂದೇಶವನ್ನು ರವಾನಿಸಬೇಕು ಎಂದು ಮನವಿ ಮಾಡಿದರು.

ಸೆ. 10ಕ್ಕೆ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಇಂದೆಯೇ ತೀರ್ಪನ್ನು ಪ್ರಕಟಿಸಿ, 1 ರೂಪಾಯಿ ದಂಡವನ್ನು ಪ್ರಶಾಂತ್ ಭೂಷಣ್ ಗೆ ವಿಧಿಸಿದೆ. ಆದರೆ, ದಂಡವನ್ನು ಪ್ರಶಾಂತ್ ಭೂಷಣ್ ಕಟ್ಟುವರೇ ಅಥವಾ ಹೋರಾಟವನ್ನು ಮುಂದುವರೆಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಇಂದು ಸಂಜೆ 4 ಗಂಟೆಗೆ ಸಿಜೆಎಆರ್ ಮತ್ತು ಸ್ವರಾಜ್ ಅಭಿಯಾನ್ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರಧ್ವಾಜ್ ಭಾಗಿಯಾಗಲಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಂಗ ನಿಂದನೆ ಪ್ರಕರಣ : ಹಿರಿಯ ವಕೀಲ ಪ್ರಶಾಂತ್ ಭೂಷಣ್‍ಗೆ ಒಂದು ರೂಪಾಯಿ ದಂಡ ವಿಧಿಸಿದ ಸರ್ವೋಚ್ಛ ನ್ಯಾಯಾಲಯ Rating: 5 Reviewed By: karavali Times
Scroll to Top