ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಟ್ವಿಟರ್ ಬರಹ : ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಮುಖನ ಬಂಧನ - Karavali Times ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಟ್ವಿಟರ್ ಬರಹ : ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಮುಖನ ಬಂಧನ - Karavali Times

728x90

3 August 2020

ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಟ್ವಿಟರ್ ಬರಹ : ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಮುಖನ ಬಂಧನ



ಬೆಂಗಳೂರು (ಕರಾವಳಿ ಟೈಮ್ಸ್) : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ತಾಣದಲ್ಲಿ ಆಕ್ಷೇಪಾರ್ಹ ಬರಹ ಬರೆದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಕೆ.ಆರ್. ಪುರಂನಲ್ಲಿರುವ ಆನಂದ್ ಪ್ರಸಾದ್ ನಿವಾಸದಿಂದ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ ಆಕ್ಷೇಪಾರ್ಹ ಬರಹ ಬರೆದಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.

ಈ ಸಂಬಂಧ ಆರೋಪಿ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1)(ಬಿ)(ಸಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಟ್ವಿಟರ್ ಬರಹ : ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಮುಖನ ಬಂಧನ Rating: 5 Reviewed By: karavali Times
Scroll to Top