ಬಂಟ್ವಾಳ ಭಾರೀ ಮಳೆಗೆ ವಿವಿಧೆಡೆ ಹಾನಿ : ಲಕ್ಷಾಂತರ ರೂಪಾಯಿ ನಷ್ಟ - Karavali Times ಬಂಟ್ವಾಳ ಭಾರೀ ಮಳೆಗೆ ವಿವಿಧೆಡೆ ಹಾನಿ : ಲಕ್ಷಾಂತರ ರೂಪಾಯಿ ನಷ್ಟ - Karavali Times

728x90

15 October 2020

ಬಂಟ್ವಾಳ ಭಾರೀ ಮಳೆಗೆ ವಿವಿಧೆಡೆ ಹಾನಿ : ಲಕ್ಷಾಂತರ ರೂಪಾಯಿ ನಷ್ಟ

 







ಬಂಟ್ವಾಳ, ಅ. 15, 2020 (ಕರಾವಳಿ ಟೈಮ್ಸ್) : ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಸುರಿದ ಭಾರೀ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಬಿ ಮೂಡ ಗ್ರಾಮದ ಕಾಮೆರಕೋಡಿ ನಿವಾಸಿ ಪುಷ್ಪ ಕೋಂ ದೇವು ಮೂಲ್ಯ ಅವರ ವಾಸ್ತವ್ಯದ ಮನೆ ಹಾನಿಗೊಂಡಿದ್ದು, ಸುಮಾರು 1 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಅಶ್ರಫ್ ಬಿನ್ ಮುಹಮ್ಮದ್ ಅವರ ಮನೆಯ ತಡೆಗೋಡೆ ಹಾಗೂ ಹೊಸ ಮನೆ ನಿರ್ಮಾಣಕ್ಕಾಗಿ ಹಾಕಲಾಗಿದ್ದ ಪಂಚಾಂಗ ಕುಸಿದಿದೆ. ಮೇರಮಜಲು ಗ್ರಾಮದ ತೇವುಕಾಡು ನಿವಾಸಿ ಹರಿಶ್ಚಂದ್ರ ಅವರ ಮನೆಯ ತಡೆಗೋಡೆ ಕುಸಿತಗೊಂಡಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ಪಿ ರಾಮಚಂದ್ರ ಬಿನ್ ಬಾಬು ಮೂಲ್ಯ ಅವರ ಪಕ್ಕಾ ಮನೆಯ ಮಾಡು ಕುಸಿದು ಹಾನಿ ಸಂಭವಿಸಿದೆ. ವೀರಕಂಭ ಗ್ರಾಮದ ಬೊಣ್ಯಕುಕ್ಕು ನಿವಾಸಿ ಶ್ರೀಧರ್ ಬೆಳ್ಚಡ ಬಿನ್ ಕೊರಗ ಬೆಳ್ಚಡ ಅವರ ವಾಸದ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸೇಸಪ್ಪ ಮೂಲ್ಯ ಅವರ ಭತ್ತದ ಗದ್ದೆಗೆ ನೀರು ತುಂಬಿ ಹಾನಿ ಸಂಭವಿಸಿದೆ ಎಂದು ಬಂಟ್ವಾಳ ತಾಲೂಕು ಕಛೇರಿ ಮಳೆ ಹಾನಿ ವಿಭಾಗದ ವಿಷಯ ನಿರ್ವಾಹಕ ವಿಶುಕುಮಾರ್ ತಿಳಿಸಿದ್ದಾರೆ.








  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಭಾರೀ ಮಳೆಗೆ ವಿವಿಧೆಡೆ ಹಾನಿ : ಲಕ್ಷಾಂತರ ರೂಪಾಯಿ ನಷ್ಟ Rating: 5 Reviewed By: karavali Times
Scroll to Top