ಬೆಂಗಳೂರು, ಅ. 19, 2020 (ಕರಾವಳಿ ಟೈಮ್ಸ್) : ಇನ್ನು ಮುಂದೆ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ದಂಡದ ಜೊತೆಗೆ 3 ತಿಂಗಳು ಚಾಲನಾ ಪರವಾನಿಗೆ (ಡಿಎಲ್) ರದ್ದುಗೊಳಿಸುವ ಮಹತ್ವದ ಆದೇಶವನ್ನು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988ರ ಕಲಂ 194ರ ಅನ್ವಯ ಸರಕಾರ ಈ ಆದೇಶ ಹೊರಡಿಸಿದೆ.
4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹಿಂಬದಿ ಸವಾರರಿಗೂ ಕೂಡಾ ಹೆಲ್ಮೆಟ್ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 230 ಉಪ ನಿಯಮ (1)ರ ಪ್ರಕಾರ ಎಲ್ಲ ದಿಚಕ್ರ ವಾಹನ ಸವಾರರು, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದೇ ಸಂಚರಿಸುವ ಪರಿಣಾಮವಾಗಿ ರಸ್ತೆ ಅಪಘಾತಗಳಲ್ಲಿ ಸವಾರರು ಸಾವನ್ನಪ್ಪುತ್ತಿದ್ದಾರೆ. ಇಂತಹ ಮರಣ/ ತೀವ್ರತರವಾದ ಗಾಯಗಳನ್ನ ತಡೆಗಟ್ಟಲು ಮೋಟಾರು ವಾಹನಗಳ ಕಾಯ್ದೆಯಡಿ ದಂಡ ಮತ್ತು ಡಿಎಲ್ ಅಮಾನತುಗೊಳಿಸಲು ಸರಕಾರ ಮುಂದಾಗಿದೆ.
0 comments:
Post a Comment