ಬಂಟ್ವಾಳ, ಅ. 07, 2020 (ಕರಾವಳಿ ಟೈಮ್ಸ್) : ಕಲ್ಲಡ್ಕ ಸಮೀಪದ ಕರಿಂಗಾನ-ಅಮ್ಟೂರು ಮಸೀದಿ ಬಳಿ ನಿವಾಸಿ ಸುಲೈಮಾನ್ ಎಂಬವರ ಮನೆಗೆ ಮಂಗಳವಾರ ರಾತ್ರಿ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ.
ಸುಲೈಮಾನ್ ಅವರ ವಿವಾಹಿತ ಪುತ್ರಿ ತವರು ಮನೆಗೆ ಬರುವಾಗ ತನ್ನಲ್ಲಿದ್ದ ಚಿನ್ನಾಭರಣ ಧರಿಸಿಕೊಂಡು ಬಂದು, ಮನೆಯ ಕೋಣೆಯ ಕಪಾಟಿನಲ್ಲಿದ್ದರು. ಮಂಗಳವಾರ ರಾತ್ರಿ ಸುಮಾರು 1.30 ಗಂಟೆಯ ವೇಳೆಗೆ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳಹೊಕ್ಕಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 28 ಪವನ್ ಚಿನ್ನಾಭರಣ ಸಹಿತ ಸುಮಾರು 600 ರೂಪಾಯಿ ನಗದು ಹಣವನ್ನ ಕಳವುಗೈದು ಪರಾರಿಯಾಗಿದ್ದಾರೆ. ರಾತ್ರಿ 2 ಗಂಟೆಯ ವೇಳೆಗೆ ಮನೆ ಮಂದಿ ಎಚ್ಚರಗೊಂಡು ನೋಡಿದಾಗ ಮನೆಯ ಹಿಂಬಾಗಿಲು ಹಾಗೂ ಕಪಾಟಿನ ಬಾಗಿಲು ತೆರೆದಿರುವುದು ಕಂಡು ಬಂದು ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದ್ದು ತನಿಖೆ ಮುಂದುವರೆದಿದೆ.
0 comments:
Post a Comment