ಸಂಗಬೆಟ್ಟು : ಕಟ್ಟಡ ಕಾಮಗಾರಿ ವೇಳೆ ತಲೆಗೆ ಕಲ್ಲು ಬಿದ್ದು ಕಾರ್ಮಿಕ ಮೃತ್ಯು - Karavali Times ಸಂಗಬೆಟ್ಟು : ಕಟ್ಟಡ ಕಾಮಗಾರಿ ವೇಳೆ ತಲೆಗೆ ಕಲ್ಲು ಬಿದ್ದು ಕಾರ್ಮಿಕ ಮೃತ್ಯು - Karavali Times

728x90

7 October 2020

ಸಂಗಬೆಟ್ಟು : ಕಟ್ಟಡ ಕಾಮಗಾರಿ ವೇಳೆ ತಲೆಗೆ ಕಲ್ಲು ಬಿದ್ದು ಕಾರ್ಮಿಕ ಮೃತ್ಯು



ಬಂಟ್ವಾಳ, ಅ. 07, 2020 (ಕರಾವಳಿ ಟೈಮ್ಸ್) : ತಾಲೂಕಿನ ಸಿದ್ದಕಟ್ಟೆ ಸಮೀಪ ಬುಧವಾರ ಬೆಳಿಗ್ಗೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕ ಇಲ್ಲಿನ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಅವರ ಪುತ್ರ ರಮಾನಂದ ಗೌಡ (30) ಅವರು ತಲೆಗೆ ಕಲ್ಲು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಸಂಗಬೆಟ್ಟು ಎಂಬಲ್ಲಿ ಮನೆ ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಗೋಡೆ ಮೇಲಿನ ಕಲ್ಲು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು, ಈ ಸಂದರ್ಭ ಅಡಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದ ರಮಾನಂದ ಗೌಡ ಅವರ ತಲೆಗೆ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 









  • Blogger Comments
  • Facebook Comments

0 comments:

Post a Comment

Item Reviewed: ಸಂಗಬೆಟ್ಟು : ಕಟ್ಟಡ ಕಾಮಗಾರಿ ವೇಳೆ ತಲೆಗೆ ಕಲ್ಲು ಬಿದ್ದು ಕಾರ್ಮಿಕ ಮೃತ್ಯು Rating: 5 Reviewed By: karavali Times
Scroll to Top