ಬೆಂಗಳೂರು, ನ. 05, 2020 (ಕರಾವಳಿ ಟೈಮ್ಸ್) : ಶಿರಾ ಹಾಗೂ ಆರ್.ಆರ್. ನಗರ ಉಪ ಚುನಾವಣೆ ಮುಗಿಯುತ್ತಿದ್ದಂತೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 40 ಪೈಸೆ ಹೆಚ್ಚಿಸಿದೆ. ಪರಿಷ್ಕೃತ ದರ ನವೆಂಬರ್ 1 ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ಕಳೆದ ಜನವರಿಯಲ್ಲೇ ಕಂಪೆನಿಗಳು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೋನಾ ಹಾಗೂ ಉಪ ಚುನಾವಣೆ ನಿಮಿತ್ತ ಪ್ರಸ್ತಾವನೆ ತಡೆಹಿಡಿಯಲಾಗಿತ್ತು. ಇದೀಗ ಸರಕಾರ ದರ ಹೆಚ್ಚಳ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
0 comments:
Post a Comment