ಮಂಗಳೂರು, ನ. 18, 2020 (ಕರಾವಳಿ ಟೈಮ್ಸ್) : ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇಲಾಖಾ ವತಿಯಿಂದ ಜನತೆಗೆ ತುರ್ತು ಸ್ಪಂದನೆಗಾಗಿ 112 ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ.
ಸಾರ್ವಜನಿಕರು ಅಪಘಾತ, ದರೋಡೆ, ಕಳ್ಳತನ, ಮಹಿಳಾ ಮತ್ತು ಮಕ್ಕಳ, ಹಿರಿಯ ನಾಗರಿಕರ ಹಾಗೂ ಇನ್ನಿತರ ಎಲ್ಲಾ ರೀತಿಯ ತುರ್ತು ಸಂದರ್ಭಗಳಲ್ಲಿ ಸಹಾಯ ವ್ಯವಸ್ಥೆ 112 ಸಂಖ್ಯೆಗೆ ಕರೆ ಮಾಡಬಹುದು. ಈ ಸೇವೆಗಾಗಿ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 10 ಹೊಯ್ಸಳ ವಾಹನಗಳು 24*7 ಅವಧಿಯಲ್ಲಿ ಕಾರ್ಯನಿರ್ವಹಿಸಲಿದೆ. ತುರ್ತು ಅವಧಿಯಲ್ಲಿ ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment