ಕುದ್ರೆಬೆಟ್ಟು : ಓಮ್ನಿ ಡಿಕ್ಕಿ ಹೊಡೆದ ಬೈಕ್ ಸವಾರ ಮೃತ್ಯು - Karavali Times ಕುದ್ರೆಬೆಟ್ಟು : ಓಮ್ನಿ ಡಿಕ್ಕಿ ಹೊಡೆದ ಬೈಕ್ ಸವಾರ ಮೃತ್ಯು - Karavali Times

728x90

23 November 2020

ಕುದ್ರೆಬೆಟ್ಟು : ಓಮ್ನಿ ಡಿಕ್ಕಿ ಹೊಡೆದ ಬೈಕ್ ಸವಾರ ಮೃತ್ಯು







ಬಂಟ್ವಾಳ, ನ. 23, 2020 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ (30) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಭಾನುವಾರ ರಾತ್ರಿ ಸುಮಾರು 10-45 ರ ವೇಳೆಗೆ ಯತಿರಾಜ್ ತನ್ನ ನೋಂದಣಿ ಸಂಖ್ಯೆ ಕೆಎ21 ಎಕ್ಸ್ 1255ಯ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಕುದ್ರೆಬೆಟ್ಟು-ಬೋಲ್ಪೋಡಿ ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಕೆಎ19 ಎಂಡಿ 2880 ನೋಂದಣಿ ಸಂಖ್ಯೆಯ ಓಮ್ನಿ ಕಾರು ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದ ಚಲಾವಣೆಯಿಂದಾಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳ ಚಾಲಕರುಗಳಾದ ಯತಿರಾಜ್ ಹಾಗೂ ಯೋಗೀಶ್ ಅವರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರಾದರೂ ಗಂಭೀರ ಗಾಯಗೊಂಡ ಯತಿರಾಜ್ ತಡ ರಾತ್ರಿ ಯತಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಅಪಘಾತದ ಬಳಿಕ ಓಮ್ನಿ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಹಾಗೂ ಎರಡೂ ವಾಹನಗಳು ಜಖಂಗೊಂಡಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಕಲಂ 279, 337,  304(ಎ), 427 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 










  • Blogger Comments
  • Facebook Comments

0 comments:

Post a Comment

Item Reviewed: ಕುದ್ರೆಬೆಟ್ಟು : ಓಮ್ನಿ ಡಿಕ್ಕಿ ಹೊಡೆದ ಬೈಕ್ ಸವಾರ ಮೃತ್ಯು Rating: 5 Reviewed By: karavali Times
Scroll to Top