ಕೊಡಾಜೆ-ಕಲ್ಲೋಲಿಗುಡ್ಡೆ ಕುಡಿಯುವ ನೀರಿನ ಟ್ಯಾಂಕಿಗೆ ಶಿಲಾನ್ಯಾಸ - Karavali Times ಕೊಡಾಜೆ-ಕಲ್ಲೋಲಿಗುಡ್ಡೆ ಕುಡಿಯುವ ನೀರಿನ ಟ್ಯಾಂಕಿಗೆ ಶಿಲಾನ್ಯಾಸ - Karavali Times

728x90

16 November 2020

ಕೊಡಾಜೆ-ಕಲ್ಲೋಲಿಗುಡ್ಡೆ ಕುಡಿಯುವ ನೀರಿನ ಟ್ಯಾಂಕಿಗೆ ಶಿಲಾನ್ಯಾಸ




ಬಂಟ್ವಾಳ, ನ. 16, 2020 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಗ್ರಾಮದ ಕೊಡಾಜೆ-ಕಲ್ಲೋಲ್ಲಿಗುಡ್ಡೆ ಪ್ರದೇಶಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಈ ಭಾಗದ ಜಿ.ಪಂ. ಸದಸ್ಯರ ಅನುದಾನ ಹಾಗೂ ಈ ಭಾಗದ ತಾ.ಪಂ. ಸದಸ್ಯರ ಮತ್ತು ಗ್ರಾಮ ಪಂಚಾಯತ್ ಸದಸ್ಯರ ಅನುದಾನದಿಂದ ಸುಮಾರು 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ನೀರಿನ ಟ್ಯಾಂಕ್ ಶಿಲಾನ್ಯಾಸವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಸೋಮವಾರ ನೆರೆವೇರಿಸಿದರು.

ಈ ಸಂದರ್ಭ ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾಧವ ಮಾವೆ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಂಚಾಯತ್ ಸದಸ್ಯರಾದ ಇಬ್ರಾಹಿಂ ಕೆ ಮಾಣಿ, ರಮಣಿ ಡಿ ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ, ಪ್ರಮುಖರಾದ ಶಿವರಾಮ ಶೆಟ್ಟಿ, ವಿಶ್ವನಾಥ ಶೆಟ್ಟಿ, ಹಸೈನಾರ್, ಇಸ್ಮಾಯಿಲ್, ಸತೀಶ್ ಬೈಲ ಮೊದಲಾದವರು ಉಪಸ್ಥಿತರಿದ್ದರು.










  • Blogger Comments
  • Facebook Comments

0 comments:

Post a Comment

Item Reviewed: ಕೊಡಾಜೆ-ಕಲ್ಲೋಲಿಗುಡ್ಡೆ ಕುಡಿಯುವ ನೀರಿನ ಟ್ಯಾಂಕಿಗೆ ಶಿಲಾನ್ಯಾಸ Rating: 5 Reviewed By: karavali Times
Scroll to Top