ಬಂಟ್ವಾಳ, ನ. 28, 2020 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಪರವಾನಿಗೆ ಇಲ್ಲದೆ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲಿನ ಕೋರೆಗೆ ಕಂದಯಾಧಿಕಾರಿಗಳು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದು, ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ, ತಾಲೂಕು ತಹಶೀಲ್ದಾರ್ ಅವರ ನಿರ್ದೇಶನದಂತೆ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಶುಕ್ರವಾರ ರಾತ್ರಿ ಈ ದಾಳಿ ನಡೆಸಿದ್ದು, ಅಕ್ರಮ ಕೋರೆಗೆ ತಡೆ ಒಡ್ಡಿದ್ದಾರೆ.
0 comments:
Post a Comment