ಬೆಂಗಳೂರು, ನ. 09, 2020 (ಕರಾವಳಿ ಟೈಮ್ಸ್) : ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಹನಗಳಿಂದುಂಟಾಗುವ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಸಂಚಾರ ಪೆÇಲೀಸ್ ಇನ್ಸ್ಪೆಕ್ಟರ್ ಮಂಜೇಗೌಡ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಅವರು ಸೋಮವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಮೋಟಾರ್ ವಾಹನ ನೀರಿಕ್ಷಕ ರಾಜ್ ಕುಮಾರ್, ಮೋಟಾರ್ ವಾಹನ ನಿರೀಕ್ಷಕ ಶ್ರೀನಿವಾಸ್, ಕಚೇರಿ ಅಧೀಕ್ಷಕರಾದ ಶಿವಕುಮಾರ್ ಹಾಗೂ ಜಯಕುಮಾರ್ ಭಾಗವಹಿಸಿದ್ದರು.
ಇದೇ ವೇಳೆ ವಾಯಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡುವ ಸ್ಟಿಕ್ಕರ್ಗಳು ಹಾಗೂ ಹ್ಯಾಂಡ್ ಬಿಲ್ಗಳನ್ನು ಬಿಡುಗಡೆಗೊಳಿಸಲಾಯಿತು.
0 comments:
Post a Comment