ಸಮೂಹ ಸಾರಿಗೆ ಹೆಚ್ಚಾಗಿ ಬಳಸಿ ವಾಯು ಮಾಲಿನ್ಯ ತಡೆಗಟ್ಟಿ : ಆರ್‍ಟಿಓ ಮಂಜುನಾಥ್ - Karavali Times ಸಮೂಹ ಸಾರಿಗೆ ಹೆಚ್ಚಾಗಿ ಬಳಸಿ ವಾಯು ಮಾಲಿನ್ಯ ತಡೆಗಟ್ಟಿ : ಆರ್‍ಟಿಓ ಮಂಜುನಾಥ್ - Karavali Times

728x90

5 November 2020

ಸಮೂಹ ಸಾರಿಗೆ ಹೆಚ್ಚಾಗಿ ಬಳಸಿ ವಾಯು ಮಾಲಿನ್ಯ ತಡೆಗಟ್ಟಿ : ಆರ್‍ಟಿಓ ಮಂಜುನಾಥ್




ಬೆಂಗಳೂರು, ನ 5, 2020 (ಕರಾವಳಿ ಟೈಮ್) : ಅನಿವಾರ್ಯ ಸಂದರ್ಭಗಳಲ್ಲದೆ ಸಣ್ಣ ಪುಟ್ಟ ಕೆಲಸಗಳಿಗೂ ಸ್ವಂತ ವಾಹನ ಬಳಸುವ ಬದಲು ಸಮೂಹ ಸಾರಿಗೆಯನ್ನು ಹೆಚ್ಚಾಗಿ ಬಳಸಿದರೆ ಪರಿಸರ ಮಾಲಿನ್ಯ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಯಶವಂತಪುರ ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. 

ಯಶವಂತಪುರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ ಪೂಲಿಂಗ್, ಬಸ್, ರೈಲುಗಳಂತಹ ಸಮೂಹ ಸಾರಿಗೆಯನ್ನು ಹೆಚ್ಚು ಬಳಸಬೇಕು. ಸಿಂಗ್ನಲ್‍ಗಳಲ್ಲಿ ಇಂಜಿನ್ ಆಫ್ ಮಾಡಬೇಕು. ವೇಗ ಮಿತಿಯನ್ನು ವೈಜ್ಞಾನಿಕವಾಗಿ ಪಾಲನೆ ಮಾಡಬೇಕು. ಈ ಮೂಲಕ ವಾಯು ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಿಸಬಹುದು ಎಂದರು.

ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ವಾಹನಗಳನ್ನು ಪ್ರಾಮಾಣಿಕವಾಗಿ ತಪಾಸಣೆ ಮಾಡಿ ಮಾಲಿನ್ಯದ ಪ್ರಮಾಣ ಹೆಚ್ಚಿದ್ದರೆ ವಾಹನದ ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಮಾಡುವಂತೆ ಸೂಚನೆ ನೀಡಬೇಕು. ಈ ಮೂಲಕ ವಾಯುಮಾಲಿನ್ಯ ನಿಯಂತ್ರಣಕ್ಕೆ ಅಳಿಲು ಸೇವೆ ಸಲ್ಲಿಸಬೇಕು. ಮರ, ಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕು. ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸಬೇಕು ಎಂದವರು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ್ ಮಾತನಾಡಿ, ಕಾನೂನು ಪಾಲನೆ ಎಲ್ಲರ ಪರಮ ಕರ್ತವ್ಯವಾಗಬೇಕು. ಕೊರೊನಾ ಸಂದರ್ಭದಲ್ಲಿ ಮಾಸ್ಕ್ ಧರಿಸುವುದರಿಂದ ವಾಯು ಮಾಲಿನ್ಯದಿಂದ ಉಂಟಾಗುತ್ತಿದ್ದ ಶ್ವಾಸಕೋಶ ಸಂಬಂಧಿಸಿದ ಕಾಯಿಲೆಗಳು ಕಡಿಮೆಯಾಗಿವೆ ಎಂದರು. ಕೊರೊನಾದ ನಂತರವೂ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲನೆ ಮಾಡಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು. 

ಜೀವನವಾಶ್ಯಕವಾಗಿದ್ದ ಗಾಳಿ, ನೀರು ಹೆಚ್ಚು ಮಲಿನಗೊಂಡಿದೆ. ವಾಯು ಮಾಲಿನ್ಯವನ್ನು ತಡೆಯುವುದು ಎಲ್ಲರ ಜವಾಬ್ದಾರಿ ಎಂದವರು ಹೇಳಿದರು. ಮೋಟಾರ್ ವಾಹನ ನಿರೀಕ್ಷಕ ಬಸವರಾಧ್ಯ, ಸ್ಥಾನಿಕ ಸಹಾಯಕಿ ಲತಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.









  • Blogger Comments
  • Facebook Comments

0 comments:

Post a Comment

Item Reviewed: ಸಮೂಹ ಸಾರಿಗೆ ಹೆಚ್ಚಾಗಿ ಬಳಸಿ ವಾಯು ಮಾಲಿನ್ಯ ತಡೆಗಟ್ಟಿ : ಆರ್‍ಟಿಓ ಮಂಜುನಾಥ್ Rating: 5 Reviewed By: karavali Times
Scroll to Top