ಬಂಟ್ವಾಳ, ಜ. 14, 2021 (ಕರಾವಳಿ ಟೈಮ್ಸ್) : ತಾಲೂಕಿನ ಬೆಂಜನಪದವು ಬಳಿ ಇತ್ತೀಚೆಗಷ್ಟೆ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಡೀಸಿ-ಎಸ್ಪಿ ಜಂಟಿ ದಾಳಿ ನಡೆಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಬೆನ್ನಿಗೆ ಇದೀಗ ಮಂಗಳವಾರ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರ ನೇತೃತ್ವದ ಕಂದಾಯ ಇಲಾಖಾಧಿಕಾರಿಗಳ ತಂಡ ತಾಲೂಕಿನ ಇರಾ ಗ್ರಾಮದ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪರವಾನಗಿ ರಹಿತವಾಗಿ ಅಕ್ರಮ ಕಲ್ಲುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ 2 ಲಾರಿ ಹಾಗೂ 2 ಯಂತ್ರಗಳನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಹಾಗೂ ಗ್ರಾಮ ಕರಣಿಕ ತನ್ವಿ ಅವರು ಈ ಕಾರ್ಯಾಚರಣೆ ನಡೆಸಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತುಗಳನ್ನು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
13 January 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment