ಬೆಂಗಳೂರು : ಸಂವಿಧಾನ ಪೀಠಿಕೆಯ ಪ್ರತಿ ಹಂಚಿ ವಿಶಿಷ್ಟವಾಗಿ ಗಣರಾಜ್ಯೋತ್ಸವ ಆಚರಿಸಿದ ದಲಿತ ಸಂಘರ್ಷ ಸಮಿತಿ - Karavali Times ಬೆಂಗಳೂರು : ಸಂವಿಧಾನ ಪೀಠಿಕೆಯ ಪ್ರತಿ ಹಂಚಿ ವಿಶಿಷ್ಟವಾಗಿ ಗಣರಾಜ್ಯೋತ್ಸವ ಆಚರಿಸಿದ ದಲಿತ ಸಂಘರ್ಷ ಸಮಿತಿ - Karavali Times

728x90

26 January 2021

ಬೆಂಗಳೂರು : ಸಂವಿಧಾನ ಪೀಠಿಕೆಯ ಪ್ರತಿ ಹಂಚಿ ವಿಶಿಷ್ಟವಾಗಿ ಗಣರಾಜ್ಯೋತ್ಸವ ಆಚರಿಸಿದ ದಲಿತ ಸಂಘರ್ಷ ಸಮಿತಿ

ಬೆಂಗಳೂರು, ಜ. 26, 2021 (ಕರಾವಳಿ ಟೈಮ್ಸ್) : ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಗಣರಾಜ್ಯೋತ್ಸವ ದಿನವಾದ ಮಂಗಳವಾರ ಬೆಂಗಳೂರು ವಿಧಾನಸೌಧಧ ಎದುರು ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿಯೊಂದಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ವಿಶಿಷ್ಟವಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸಿ.ಎಸ್ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೆÇಲೀಸರು ಹಾಗೂ ಸಾರ್ವಜನಿಕರಿಗೆ ಇವುಗಳನ್ನು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನಿಸುತ್ತಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದರು.
  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರು : ಸಂವಿಧಾನ ಪೀಠಿಕೆಯ ಪ್ರತಿ ಹಂಚಿ ವಿಶಿಷ್ಟವಾಗಿ ಗಣರಾಜ್ಯೋತ್ಸವ ಆಚರಿಸಿದ ದಲಿತ ಸಂಘರ್ಷ ಸಮಿತಿ Rating: 5 Reviewed By: karavali Times
Scroll to Top