ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಸಹಿ : ತಕ್ಷಣದಿಂದಲೇ ಕಾಯ್ದೆ ಜಾರಿ - Karavali Times ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಸಹಿ : ತಕ್ಷಣದಿಂದಲೇ ಕಾಯ್ದೆ ಜಾರಿ - Karavali Times

728x90

5 January 2021

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಸಹಿ : ತಕ್ಷಣದಿಂದಲೇ ಕಾಯ್ದೆ ಜಾರಿ



ಬೆಂಗಳೂರು, ಜ 05, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ಮಂಗಳವಾರ ಸಹಿ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020ನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು. ಆದರೆ ಬಿಜೆಪಿ ಸರಕಾರಕ್ಕೆ ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಮಂಡನೆಯಾಗಿರಲಿಲ್ಲ. ಹೀಗಾಗಿ ಈ ಕಾಯ್ದೆ ಜಾರಿಗೆ ರಾಜ್ಯ ಸರಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸರಕಾರದ ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಮಂಗಳವಾರ ಸಹಿ ಹಾಕಿದ್ದಾರೆ.

ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿಗೂ ಮೇಲೆ ಕೂಡಾ ನಿರ್ಬಂಧ ವಿಧಿಸಲಾಗಿದೆ. ಹತ್ಯೆಗಾಗಿ ಜಾನುವಾರು ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.








  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಸಹಿ : ತಕ್ಷಣದಿಂದಲೇ ಕಾಯ್ದೆ ಜಾರಿ Rating: 5 Reviewed By: karavali Times
Scroll to Top