ಬಂಟ್ವಾಳ, ಫೆ. 05, 2021 (ಕರಾವಳಿ ಟೈಮ್ಸ್) : ಕೋವಿಡ್ ಸಂಕಷ್ಟದ ಕಾರಣದಿಂದ ಶಾಲಾ ಶುಲ್ಕದಲ್ಲಿ 70 ಶೇಕಡಾ ಮಾತ್ರ ಸಂಗ್ರಹಿಸಿ 30 ಶೇಕಡಾ ಶುಲ್ಕ ವಿನಾಯಿತಿ ನೀಡುವಂತೆ ಈಗಾಗಲೇ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಾಲೂಕಿನ ಎಲ್ಲಾ ಖಾಸಗಿ ಶಾಲೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅವರು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರಿಗೆ ಸೂಚಿಸಿದರು.
ಶುಕ್ರವಾರ ನಡೆದ ಇಲ್ಲಿನ ತಾ ಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ತಾಲೂಕಿನ ಕೆಲ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ದಾಖಲಾತಿ ಸಂದರ್ಭ ಸರಕಾರ ನಿಗದಿಪಡಿಸಿದ ಆದೇಶವನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳು ಸರಕಾರದ ಆದೇಶ ಉಲ್ಲಂಘಿಸದೆ ವಿದ್ಯಾರ್ಥಿ ಸ್ನೇಹಿಯಾಗಿ ವರ್ತಿಸುವಂತೆ ನೋಡಿಕೊಳ್ಳಬೇಕು ಎಂದವರು ಶಿಕ್ಷಣಾಧಿಕಾರಿಗೆ ಸೂಚಿಸಿದರು.
ಅಧ್ಯಕ್ಷ ಚಂದ್ರಹಾಸ ಕರ್ಕೇರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್ ಬಳಿಕ ತಾಲೂಕಿನ ಎಲ್ಲಾ ಹಾಸ್ಟೆಲ್ಗಳು ಪುನರಾರಂಭಗೊಂಡಿದೆ ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಭೆಗೆ ತಿಳಿಸಿದರು. ಸಭೆಗೆ ಮೆಸ್ಕಾಂ ಇಲಾಖಾಧಿಕಾರಿಗಳು ಗೈರು ಹಾಜರಾಗಿರುವುದು ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.
ಇದೇ ವೇಳೆ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಟಾರ್ಗೆಟ್ಗೆ ತಕ್ಕಂತೆ ಬಿಡುಗಡೆಯಾದ ಅನುದಾನದ ಹಣವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡಿ ಕಾಮಗಾರಿ ಮುಗಿಸುವಂತೆ ವಿವಿಧ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
5 February 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment