ಬೆಂಗಳೂರಿಗೆ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ : ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಬೆಂಗಳೂರಿಗೆ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ : ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

10 March 2021

ಬೆಂಗಳೂರಿಗೆ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ : ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  



ಬಂಟ್ವಾಳ, ಮಾ. 11, 2021 (ಕರಾವಳಿ ಟೈಮ್ಸ್) :
ತಾಲೂಕಿನ ಬಾಳ್ತಿಲ ಗ್ರಾಮದ ಕುರ್ಮಾನ್ ನಿವಾಸಿ ಉದಯರಾಜ್ (26) ಅವರು ಬೆಂಗಳೂರಿನಲ್ಲಿ ಬಟ್ಟೆ ಅಂಗಡಿ ಕೆಲಸಕ್ಕೆ ತೆರಳಿದ್ದವರು ಕಾಣೆಯಾಗಿದ್ದಾರೆ ಎಂದು ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 


    ಉದಯರಾಜ್ ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದು ಕಳೆದ ಕೊರೋನಾ ಲಾಕ್‍ಡೌನ್ ಅವಧಿಯಲ್ಲಿ ಊರಿಗೆ ಬಂದು ಬಾಕಿಯಾಗಿದ್ದರು. ಬಳಿಕ ಅನ್‍ಲಾಕ್ ಸಮಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಮತ್ತೆ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದರು. ಮನೆ ಮಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಇವರು ಫೆಬ್ರವರಿ 20 ರ ಬಳಿಕ ಯಾವುದೇ ಸಂಪರ್ಕಕ್ಕೆ ದೊರೆತಿಲ್ಲ ಎನ್ನಲಾಗಿದೆ. ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅಂಗಡಿ ಮಾಲಕರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ. ಈ ಬಗ್ಗೆ ಅವರ ಸಹೋದರ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರಿಗೆ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ : ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top