ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ರಸ್ತೆ ಕುಸಿತ : ಘನ ವಾಹನ ಸಂಚಾರ ನಿಷೇಧಿಸಿ ಆದೇಶ - Karavali Times ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ರಸ್ತೆ ಕುಸಿತ : ಘನ ವಾಹನ ಸಂಚಾರ ನಿಷೇಧಿಸಿ ಆದೇಶ - Karavali Times

728x90

23 April 2021

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ರಸ್ತೆ ಕುಸಿತ : ಘನ ವಾಹನ ಸಂಚಾರ ನಿಷೇಧಿಸಿ ಆದೇಶ

 
ಮಡಿಕೇರಿ, ಎಪ್ರಿಲ್ 23, 2021 (ಕರಾವಳಿ ಟೈಮ್ಸ್) :
ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಕುಸಿತ ಸಂಭವಿಸಿದ್ದು, ಅಪಾಯ ಎದುರಾಗುವ ಸಾಧ್ಯತೆ ಬಗ್ಗೆ ಆತಂಕಪಡಲಾಗಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಉಂಟಾಗಿದ್ದು, ವಾಹನ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ. 


    ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದೆ. ನಿರಂತರವಾಗಿ ಭಾರೀ ವಾಹನಗಳು ಸಂಚಾರ ಮುಂದುವರಿಸಿದಲ್ಲಿ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪೂರ್ಣ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಈ ಹಿಂದೆಯೂ ಮಳೆಗಾಲದ ಸಂಸರ್ಭ ಈ ರಸ್ತೆ ಹಾಳಾಗಿತ್ತು. ಬಳಿಕ ಇದನ್ನು  ಸರಿಪಡಿಸಲಾಗಿತ್ತು. ಇದೀಗ ಮತ್ತೆ ರಸ್ತೆ ಕೆಳಭಾಗದಿಂದ ಕುಸಿತಕ್ಕೆ ಒಳಗಾಗುತ್ತಿದೆ. ಮಳೆ ಮುಂದುವರಿದಲ್ಲಿ ಈ ರಸ್ತೆ ಕುಸಿತದಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಬಗ್ಗೆ ಆತಂಕಪಡಲಾಗಿದೆ. 


    ಘಟನಾ ಸ್ಥಳಕ್ಕೆ ಶಾಸಕ ಕೆ.ಜಿ. ಬೋಪಯ್ಯ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಬದಿ ನಿರ್ಮಾಣ ಮಾಡಲಾಗಿರುವ ಚರಂಡಿ ಬಳಿ ಮಣ್ಣು ಕುಸಿದಿದ್ದು, ರಸ್ತೆಯ ಮೇಲೆ ನೀರು ಹರಿದು ಹೋಗುತ್ತಿದೆ. ಆದ್ದರಿಂದ ತಕ್ಷಣ ರಸ್ತೆ ಸರಿಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಅವರಿಗೆ ಶಾಸಕರು ಸೂಚಿಸಿದ್ದಾರೆ.


    ಹೆದ್ದಾರಿ ಬಳಿ ಮತ್ತಷ್ಟು ಸಿಪೇಜ್ ಆಗುವುದು ಕಂಡು ಬಂದಲ್ಲಿ ತಾತ್ಕಾಲಿಕವಾಗಿ ಬದಲಿ ಸಂಚಾರ ಮಾರ್ಗ ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬೃಹತ್ ವಾಹನಗಳ ಸಂಚಾರ ಸ್ಥಗಿತಗೊಳಿಸುವಂತೆಯೂ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. 


    ಭಾರೀ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಬದಲಿ ರಸ್ತೆ ಮಾರ್ಗದ ಬಗ್ಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಮತ್ತೆ ರಸ್ತೆ ಕುಸಿತ : ಘನ ವಾಹನ ಸಂಚಾರ ನಿಷೇಧಿಸಿ ಆದೇಶ Rating: 5 Reviewed By: karavali Times
Scroll to Top