ಕೊರೋನಾ ಅಬ್ಬರ ಹಿನ್ನಲೆ : ಮೇ-ಜೂನ್ ತಿಂಗಳಲ್ಲಿ ಕೇಂದ್ರದಿಂದ ಬಡವರಿಗೆ ಉಚಿತ ಆಹಾರ ಧಾನ್ಯ ಘೋಷಣೆ - Karavali Times ಕೊರೋನಾ ಅಬ್ಬರ ಹಿನ್ನಲೆ : ಮೇ-ಜೂನ್ ತಿಂಗಳಲ್ಲಿ ಕೇಂದ್ರದಿಂದ ಬಡವರಿಗೆ ಉಚಿತ ಆಹಾರ ಧಾನ್ಯ ಘೋಷಣೆ - Karavali Times

728x90

23 April 2021

ಕೊರೋನಾ ಅಬ್ಬರ ಹಿನ್ನಲೆ : ಮೇ-ಜೂನ್ ತಿಂಗಳಲ್ಲಿ ಕೇಂದ್ರದಿಂದ ಬಡವರಿಗೆ ಉಚಿತ ಆಹಾರ ಧಾನ್ಯ ಘೋಷಣೆ


ನವದೆಹಲಿ, ಎಪ್ರಿಲ್ 23, 2021 (ಕರಾವಳಿ ಟೈಮ್ಸ್) : ಕೊರೋನಾ ವೈರಸ್À 2ನೇ ಅಲೆ ದೇಶವನ್ನು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ ಹಾಗೂ ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಕೇಂದ್ರ ಸರಕಾರ ಘೋಷಣೆ ಮಾಡಿದೆ. 


    ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರಕಾರ ವಿತರಣೆ ಮಾಡಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು £ನೀಡಿರುವ ಮಾಹಿತಿ ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆ.ಜಿಯಷ್ಟು ಆಹಾರ ಧಾನ್ಯಗಳು ಸಿಗಲಿದ್ದು, ಒಟ್ಟು 80 ಕೋಟಿ ಫಲಾನುಭವಿಗಳಿಗೆ 2 ತಿಂಗಳ ಕಾಲ ಉಚಿತ ಧಾನ್ಯಗಳು ಲಭ್ಯವಾಗಲಿದೆ. ಕಳೆದ ವರ್ಷ ಕೊರೋನಾ ಲಾಕ್‍ಡೌನ್ ವಿಧಿಸಿದ್ದಾಗ ಕೇಂದ್ರ ಸರಕಾರ ಬಿಪಿಎಲ್ ಪಡಿತರ ಚೀಟಿ ಹೊಂದಿರುವ  ಬಡವರಿಗೆ ಧಾನ್ಯಗಳನ್ನು ನೀಡುವ ಯೋಜನೆಯನ್ನು ಘೋಷಿಸಿತ್ತು. ಇದೀಗ ಮತ್ತೆ ಮೇ-ಜೂನ್ ತಿಂಗಳಲ್ಲಿ ಈ ಯೋಜನೆ ಮುಂದುವರಿಸಿರುವ ಸರಕಾರ ಇದಕ್ಕಾಗಿ 26 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಕಾರ್ಯದರ್ಶಿ ಸುಧಾಂಶು ಪಾಂಡೇ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಅಬ್ಬರ ಹಿನ್ನಲೆ : ಮೇ-ಜೂನ್ ತಿಂಗಳಲ್ಲಿ ಕೇಂದ್ರದಿಂದ ಬಡವರಿಗೆ ಉಚಿತ ಆಹಾರ ಧಾನ್ಯ ಘೋಷಣೆ Rating: 5 Reviewed By: karavali Times
Scroll to Top