ಮಂಗಳೂರು, ಮೇ 23, 2021 (ಕರಾವಳಿ ಟೈಮ್ಸ್) : ಕೊರೊನಾ ಸಾಂಕ್ರಾಮಿಕ ರೋಗದ 2ನೇ ಅಲೆ ತಡೆಗಟ್ಟಲು ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಇದ್ದ ಕೊರೋನಾ ಕಫ್ರ್ಯೂ ಸಂದರ್ಭ ಎಪ್ರಿಲ್ 22 ರಿಂದ ಇದುವರೆಗೆ ಒಟ್ಟು 7,636 ಮಾಸ್ಕ್ ಪ್ರಕರಣ, ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ 76 ಪ್ರಕರಣಗಳನ್ನು ದಾಖಲಸಿಲಾಗಿದ್ದು ಹಾಗೂ ಅನಗತ್ಯವಾಗಿ ತಿರುಗಾಡುತ್ತಿದ್ದ 840 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಎಂದು ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೊನಾವನೆ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕೊರೋನಾ ರೋಗ ತಡೆಗಟ್ಟುವ ನಿಮಿತ್ತ ಅದೇಶಿಸಿರುವ ನಿಯಮಾವಳಿಗಳನ್ನು ಜೂನ್ 7ರವರೆಗೂ ವಿಸ್ತರಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ನಿಯಮಾವಳಿಗಳ ಪಾಲನೆಯನ್ನು ನಿಗದಿತ ದಿನಾಂಕದವರೆಗೆ ಇನ್ನಷ್ಟು ಕಟ್ಟುನಿಟ್ಟಾಗಿ ಪೊಲೀಸ್ ಇಲಾಖೆ ಅನುಷ್ಟಾನಗೊಳಿಸಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಅತ್ಯಂತ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಅನಗತ್ಯವಾಗಿ ತಿರುಗಾಡದೇ ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
23 May 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment