ಬೆಂಗಳೂರು, ಮೇ 24, 2021 (ಕರಾವಳಿ ಟೈಮ್ಸ್) : ಕೊರೋನಾ ಬಾಧಿತ ವ್ಯಕ್ತಿಗಳು ಮೃತಪಟ್ಟಲ್ಲಿ ಖಾಸಗಿ ಆಸ್ಪತ್ರೆಗಳು ಬಾಕಿ ಬಿಲ್ ಪಾವತಿಸಲು ನಡೆಸುವ ಒತ್ತಡದ ಬಗ್ಗೆ ರಾಜ್ಯ ಸರಕಾರ ಕೊನೆಗೂ ಗಂಭೀರವಾಗಿ ಪರಿಗಣಿಸಿದೆ.
ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ ಮೆಂಟ್ ಆಕ್ಟ್ (ಕೆಪಿಎಂಇ) 2007 ಭಾಗ 11 (I) ಉಪ ಶರತ್ತು (iv) ರನ್ವಯ ಮೃತ ವ್ಯಕ್ತಿಯ ದೇಹವನ್ನು ಹಸ್ತಾರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಿಲ್ಲ ಅಥವಾ ಒತ್ತಡ ಹೇರುವಂತಿಲ್ಲ. ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಮೃತದೇಹ ಹಸ್ತಾಂತರಿಸಲು ನಿರಾಕರಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿರುವ ಹಿನ್ನಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕೆಪಿಎಂಇ ಕಾಯ್ದೆಯಡಿ ಆಸ್ಪತ್ರೆಯ ನೋಂದಣಿ ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೆಪಿಎಂಇ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿರುವ ಸರಕಾರ ಈ ರೀತಿ ವರದಿಯಾದ ಪ್ರಕರಣಗಳ ಬಗ್ಗೆ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೆ ಒಂದು ಬಾರಿ ರಾಜ್ಯಮಟ್ಟಕ್ಕೆ ವರದಿ ಸಲ್ಲಿಸುವಂತೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಅಪರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರು ಆದೇಶಿಸಿದ್ದಾರೆ.
0 comments:
Post a Comment