ಬೆಂಗಳೂರು, ಮೇ 26, 2021 (ಕರಾವಳಿ ಟೈಮ್ಸ್) : ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ಎಚ್.ಎಸ್. ದೊರೆಸ್ವಾಮಿ (103) ಬುಧವಾರ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.
ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾದ ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆಗೊಳಗಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಪದೇ ಪದೇ ನನಗೆ ವಯಸ್ಸಾಗಿದೆ. ಆಸ್ಪತ್ರೆಗೆ ಬರಲ್ಲ, ನನ್ನ ಬೆಡ್ ಯುವಕರಿಗೆ ಉಪಯೋಗವಾಗಲಿ ಅಂತ ದೊರೆಸ್ವಾಮಿ ಈ ಹಿಂದೆ ಹೇಳಿದ್ದರು. ಈ ವೇಳೆ ಜಯದೇವ ವೈದ್ಯ ಡಾ ಮಂಜುನಾಥ್ ಅವರು, ಬೆಡ್ ಕೊರತೆ ಇಲ್ಲ ಅಂತ ಮನವೊಲಿಸಿ ಮತ್ತೆ ಉಸಿರಾಟದ ತೊಂದರೆ ಬಂದಾಗ ಆಸ್ಪತ್ರೆಗೆ ದಾಖಲು ಮಾಡಿದ್ದರು.
0 comments:
Post a Comment