ಬಂಟ್ವಾಳ, ಮೇ 21, 2021 (ಕರಾವಳಿ ಟೈಮ್ಸ್) : ಆಧುನಿಕ ಭಾರತದ ನಿರ್ಮಾತೃ , ಡಿಜಿಟಲ್ ಕ್ರಾಂತಿಯ ಮೂಲಕ ದೇಶದ ಪ್ರಗತಿಗೆ ಮುನ್ನುಡಿ ಬರೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 30ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮುಡಿಪು ಬ್ಲಾಕ್ ಕಾಂಗ್ರೆಸ್ ಗೆ ಒಳಪಟ್ಟ ಪುದು ವಲಯ ಕಾಂಗ್ರೆಸ್ ಹಾಗೂ ಪುದು ಯುವ ಕಾಂಗ್ರೆಸ್ ವತಿಯಿಂದ ಕೋವಿಡ್ ಸಂತ್ರಸ್ತರಿಗೆ ರೇಷನ್ ಕಿಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಝೆರ್ ವಿತರಿಸಲಾಯಿತು.
ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲೀಡಿಯ ಪಿಂಟೋ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪೇರಿಮಾರ್, ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಜೀದ್ ಪೇರಿಮಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಅತ್ತಾವರ್ , ಮಂಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಮುಖಂಡ ಹಿಶಾಂ ಫರಂಗಿಪೇಟೆ, ಪುದು ಯುವ ಕಾಂಗ್ರೆಸ್ ಅಧ್ಯಕ್ಷ ನಿಝಾಂ ಕುಂಜತ್ತಕಲ್, ಪುದು ಗ್ರಾ.ಪಂ. ಸದಸ್ಯ ಇಕ್ಬಾಲ್ ಸುಜೀರ್, ಕಿಶೋರ್ ಸುಜೀರ್, ರಝಾಕ್ ಅಮೆಮಾರ್, ಪುದು ಯುವ ಕಾಂಗ್ರೆಸ್ ಸದಸ್ಯ ಇನ್ಶಾದ್ ಮಾರಿಪಳ್ಳ, ರಿಲ್ವಾನ್ ಅಮೆಮಾರ್, ಪಶ್ವತ್ ಫರಂಗಿಪೇಟೆ, ಸಲ್ಮಾನ್ ಫಾರಿಶ್ ತಶೀಕ್ ಫರಂಗಿಪೇಟೆ, ಫೈಝಲ್ ಫರಂಗಿಪೇಟೆ, ಸಾಹಿಲ್ ಅಮೆಮಾರ್, ನಿಶಾಂ ಕುಂಜತ್ತಕಲ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment