ಬಂಟ್ವಾಳ, ಮೇ 22, 2021 (ಕರಾವಳಿ ಟೈಮ್ಸ್) : ರಾಷ್ಟ್ರವ್ಯಾಪ್ತಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭ ಮಾತನಾಡಿದ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್, ನಮ್ಮ ದೇಶ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಭಯೋತ್ಪಾದಕ ಶಕ್ತಿಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು ಪರಸ್ಪರ ಸಹಕಾರದಿಂದ ಬದುಕಬೇಕು ಎಂದರು.
ಈ ಸಂದರ್ಭ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
22 May 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment