ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕಕ್ಕೆ ವಿವಿಧ ಬ್ಲಾಕ್ ಅಧ್ಯಕ್ಷರುಗಳ ನೇಮಕ - Karavali Times ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕಕ್ಕೆ ವಿವಿಧ ಬ್ಲಾಕ್ ಅಧ್ಯಕ್ಷರುಗಳ ನೇಮಕ - Karavali Times

728x90

29 June 2021

ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕಕ್ಕೆ ವಿವಿಧ ಬ್ಲಾಕ್ ಅಧ್ಯಕ್ಷರುಗಳ ನೇಮಕ

 ಮಂಗಳೂರು, ಜೂನ್ 29, 2021 (ಕರಾವಳಿ ಟೈಮ್ಸ್) : ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಜಿ ಎಸ್ ಮಂಜುನಾಥ್ ಅವರ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕ್ಷೇತ್ರದ ಪಕ್ಷದ ಶಾಸಕರು, ಮಾಜಿ ಶಾಸಕರ ಅನುಮೋದನೆಯೊಂದಿಗೆ ಮತ್ತು ಬ್ಲಾಕ್ ಅಧ್ಯಕ್ಷರುಗಳ ಶಿಫಾರಸಿನೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ವಿವಿಧ ಬ್ಲಾಕ್ ಅಧ್ಯಕ್ಷರುಗಳನ್ನು ನೇಮಿಸಿ ಅಸಂಘಟಿತ ಕಾರ್ಮಿಕ ಘಟಕದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಆದೇಶಿಸಿದ್ದಾರೆ. 

ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾಗಿ ವ್ಯಾಸ ರಾವ್, ಮೂಡಬಿದ್ರೆ ಬ್ಲಾಕ್ ಅಧ್ಯಕ್ಷರಾಗಿ ಜಯರಾಮ ಬಂಗೇರ, ಮುಲ್ಕಿ ಬ್ಲಾಕ್ ಅಧ್ಯಕ್ಷರಾಗಿ ಮಹೇಶ್ ಯಾನೆ ಮುನ್ನ, ಸುರತ್ಕಲ್ ಬ್ಲಾಕ್ ಅಧ್ಯಕ್ಷರಾಗಿ ಆನಂದ ಸುರತ್ಕಲ್, ಗುರುಪುರ ಬ್ಲಾಕ್ ಅಧ್ಯಕ್ಷರಾಗಿ ಫಹದ್ ಇಬ್ನು ಮುಫೀದ್, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾಗಿ ಪ್ರಶಾಂತ್ ಅಮೀನ್, ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಳ್ಳಾಲ ಬ್ಲಾಕ್ ಅಧ್ಯಕ್ಷರಾಗಿ ಬಶೀರ್ ಮುಂಡೋಡಿ, ಮುಡಿಪು ಬ್ಲಾಕ್ ಅಧ್ಯಕ್ಷರಾಗಿ ಮುರಳೀಧರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾಗಿ ರಾಮಚಂದ್ರ ಸುವರ್ಣ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾಗಿ ರೋಶನ್ ರೈ, ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಮೆಲ್ವೀನ್ ಮೊಂತೆರೋ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಶೇಸÀಪ್ಪ ನಿಕ್ಕಿಲು, ಸುಳ್ಯ ಬ್ಲಾಕ್ ಅಧ್ಯಕ್ಷರಾಗಿ ವಸಂತ ಕುಡಪಾಜೆ, ಕಡಬ ಬ್ಲಾಕ್ ಅಧ್ಯಕ್ಷರಾಗಿ ರಾಜಕೃಷ್ಣ ಬಿಳಿನೆಲೆ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕಕ್ಕೆ ವಿವಿಧ ಬ್ಲಾಕ್ ಅಧ್ಯಕ್ಷರುಗಳ ನೇಮಕ Rating: 5 Reviewed By: karavali Times
Scroll to Top