ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಜೀವಂತವಾಗಿದ್ದರೆ ಅವರನ್ನೂ ಬಿಜೆಪಿಗರು ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿದ್ದರು : ಮೊಹಬೂಬಾ ಕಿಡಿ - Karavali Times ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಜೀವಂತವಾಗಿದ್ದರೆ ಅವರನ್ನೂ ಬಿಜೆಪಿಗರು ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿದ್ದರು : ಮೊಹಬೂಬಾ ಕಿಡಿ - Karavali Times

728x90

13 June 2021

ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಜೀವಂತವಾಗಿದ್ದರೆ ಅವರನ್ನೂ ಬಿಜೆಪಿಗರು ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿದ್ದರು : ಮೊಹಬೂಬಾ ಕಿಡಿ

 ಶ್ರೀನಗರ, ಜೂನ್ 14, 2021 (ಕರಾವಳಿ ಟೈಮ್ಸ್) : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಇವತ್ತು ಜೀವಂತವಾಗಿದ್ದಿದ್ದರೆ ಅವರನ್ನೂ ಬಿಜೆಪಿಗರು ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿದ್ದರು ಎಂದು ಪಿಡಿಪಿ ಮುಖ್ಯಸ್ಥೆ ಮೊಹಬೂಬಾ ಮುಫ್ತಿ ಕಿಡಿ ಕಾರಿದ್ದಾರೆ.  

 ಸಂವಿಧಾನದ 370ನೇ ವಿಧಿ ಮೂಲಕ ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಲಾಗಿತ್ತು. ಆದರೆ ಈ ವಿಶೇಷ ಅಧಿಕಾರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ ಅಂಬೇಡ್ಕರ್ ಈಗ ಜೀವಂತವಾಗಿಲ್ಲ, ಇದ್ದಿದ್ದರೆ ಅವರನ್ನು ಪಾಕಿಸ್ತಾನ ಪರ ಎಂದು ಬಿಜೆಪಿಗರು ದೂಷಿಸುತ್ತಿದ್ದರು ಎಂದು ಮುಫ್ತಿ ಆರೋಪಿಸಿದ್ದಾರೆ.  

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದು ಇದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಿಗೆ ಮುಫ್ತಿ ಈ ಹೇಳಿಕೆ ನೀಡಿದ್ದಾರೆ. 

 2019 ರಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.

  • Blogger Comments
  • Facebook Comments

0 comments:

Post a Comment

Item Reviewed: ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಜೀವಂತವಾಗಿದ್ದರೆ ಅವರನ್ನೂ ಬಿಜೆಪಿಗರು ಪಾಕ್ ಪರ ಎಂದು ಅಪಪ್ರಚಾರ ಮಾಡುತ್ತಿದ್ದರು : ಮೊಹಬೂಬಾ ಕಿಡಿ Rating: 5 Reviewed By: karavali Times
Scroll to Top