ಮಂಗಳೂರು ಅಂಚೆ ವಿಭಾಗದಲ್ಲಿ ಜೂನ್ 21 ರಂದು ಪಿಂಚಣಿ ಅದಾಲತ್ ಹಾಗೂ ಅಂಚೆ ಅದಾಲತ್ - Karavali Times ಮಂಗಳೂರು ಅಂಚೆ ವಿಭಾಗದಲ್ಲಿ ಜೂನ್ 21 ರಂದು ಪಿಂಚಣಿ ಅದಾಲತ್ ಹಾಗೂ ಅಂಚೆ ಅದಾಲತ್ - Karavali Times

728x90

10 June 2021

ಮಂಗಳೂರು ಅಂಚೆ ವಿಭಾಗದಲ್ಲಿ ಜೂನ್ 21 ರಂದು ಪಿಂಚಣಿ ಅದಾಲತ್ ಹಾಗೂ ಅಂಚೆ ಅದಾಲತ್

ಮಂಗಳೂರು, ಜೂನ್ 10, 2021 (ಕರಾವಳಿ ಟೈಮ್ಸ್) : ಮಂಗಳೂರು ಅಂಚೆ ವಿಭಾಗದ ಅರ್ಧ ವಾರ್ಷಿಕ ಪಿಂಚಣಿದಾರರ ಅದಾಲತ್ ಜೂರ್ಣ 21 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂಚೆ ವಿಭಾಗದ ಬಲ್ಮಠದಲ್ಲಿರುವ ಹಿರಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿದೆ. 

ಅದೇ ದಿನ ಅಪರಾಹ್ನ 3 ಗಂಟೆಗೆ ತ್ರೈ ಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಮಂಗಳೂರುಅಂಚೆ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲ ರೀತಿಯ ಸಾರ್ವಜನಿಕ ಕುಂದು-ಕೊರತೆ, ತಕರಾರುಗಳನ್ನು ಪರಿಶೀಲಿಸಲಾಗುವುದು. ಪಿಂಚಣಿದಾರರ ಅದಾಲತ್ತಿನಲ್ಲಿ ಪಿಂಚಣಿಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲಾಗುವುದು.

ಸಾರ್ವಜನಿಕರು ಈ ಬಗ್ಗೆ ಸಂಬಂಧಪಟ್ಟ ದೂರುಗಳಿದ್ದಲ್ಲಿ ಪತ್ರ ಮೂಲಕ “ಅಂಚೆ ಅದಾಲತ್/ ಪಿಂಚಣಿದಾರರ ಅದಾಲತ್” ಎಂಬ ತಲೆ ಬರಹದಡಿ ಜೂನ್ 18ರೊಳಗೆ ‘ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ-ಮಂಗಳೂರು-575002’ ವಿಳಾಸಕ್ಕೆ ಅಥವಾ ವಾಟ್ಸಪ್ ಸಂಖ್ಯೆ 9448291072 ಗೆ ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸುವಂತೆ ಮಂಗಳೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಅಂಚೆ ವಿಭಾಗದಲ್ಲಿ ಜೂನ್ 21 ರಂದು ಪಿಂಚಣಿ ಅದಾಲತ್ ಹಾಗೂ ಅಂಚೆ ಅದಾಲತ್ Rating: 5 Reviewed By: karavali Times
Scroll to Top