ಬಂಟ್ವಾಳ, ಜೂನ್ 28, 2021 (ಕರಾವಳಿ ಟೈಮ್ಸ್) : ಮಂಗಳೂರು ಶಾಸಕ ಯು ಟಿ ಖಾದರ್ ಅವರ ವಿಶೇಷ ಸೂಚನೆಯಂತೆ ಪುದು ಗ್ರಾ ಪಂಚಾಯತ್ ಹಾಗೂ ಆರೋಗ್ಯ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ ಬೀದಿ ಬದಿ ವ್ಯಾಪಾರಿಗಳು, ಅಟೋ ಚಾಲಕರು ಹಾಗೂ ಕಾರ್ಮಿಕರು, ಹೋಟೆಲ್ ಕಾರ್ಮಿಕರುಗಳಿಗೆ ಲಸಿಕಾ ಕಾರ್ಯಕ್ರಮ ಸೋಮವಾರ ಫರಂಗಿಪೇಟೆ ಸೇವಾಂಜಲಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸುಮಾರು 350 ಮಂದಿ ಲಸಿಕೆ ಸ್ವೀಕರಿಸಿದರು. ಇದೇ ವೇಳೆ ಪುದು ಪಂಚಾಯತ್ ವ್ಯಾಪ್ತಿಯ ಸುಮಾರು 60 ಮಂದಿ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಯಿತು.
ಈ ಸಂದರ್ಭ ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲೀಡಿಯಾ ಪಿಂಟೋ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಹರೀಶ್ ಕೆ ಎ, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಸ್ಥಳದಾನಿ ಕೃಷ್ಣಕುಮಾರ್ ಪೂಂಜಾ, ಪುದು ಅರೋಗ್ಯ ಕೇಂದ್ರದ ಅರೋಗ್ಯಾಧಿಕಾರಿ ಡಾ ಸುದರ್ಶನ್, ಸಿಬ್ಬಂದಿಗಳಾದ ರೋಹಿಣಿ, ಪ್ರಿಯಾ, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳಾದ ಮುಹಮ್ಮದ್ ಶರೀಫ್, ಅಬ್ದುಲ್ ಸಲಾಂ ಹಾಗೂ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.
0 comments:
Post a Comment