ಬಂಟ್ವಾಳ, ಜುಲೈ 02, 2021 (ಕರಾವಳಿ ಟೈಮ್ಸ್) : ಕಂದಾಯ ದಿನಾಚರಣೆ ಪ್ರಯುಕ್ತ ಹಸಿರೋತ್ಸವ ಕಾರ್ಯಕ್ರಮ ಶುಕ್ರವಾರ ಬಿ ಸಿ ರೋಡು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಆಚರಿಸಲಾಯಿತು.
ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಹಲಸಿನ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೇಂದ್ರ ಸ್ಥಾನೀಯ ಉಪ ತಹಶೀಲ್ದಾರ್ ಅಣ್ಣು ನಾಯ್ಕ್, ಉಪ ತಹಸೀಲ್ದಾರ್ ರಾಜೇಶ್ ನಾಯ್ಕ್, ಭೂಮಿ ಶಾಖೆ ಪ್ರಭಾರ ಶಿರಸ್ತೇದಾರ್ ಭಾನು ಪ್ರಕಾಶ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಜೆ ಜನಾರ್ದನ, ಬಂಟ್ವಾಳ ಕಂದಾಯ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್ ಪಿ, ಉಪಾಧ್ಯಕ್ಷ ಸೀತಾರಾಮ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕೆ ಎಚ್, ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕೆ ಪೂಜಾರಿ, ಉಪಾಧ್ಯಕ್ಷ ಕರಿಬಸಪ್ಪ ಜಿ ನಾಯಕ್, ಬಂಟ್ವಾಳ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮೋಹನ್ ದಾಸ್ ಕಲ್ಲಡ್ಕ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಮೊದಲಾದವರು ಭಾಗವಹಿಸಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು.
0 comments:
Post a Comment