ಸಿದ್ದು ಸರಕಾರ 99% ಭರವಸೆ ಈಡೇರಿಸಿದೆ : ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ನಳಿನ್ ಕಟೀಲ್ ಗೆ ಸವಾಲೆಸದೆದ ಡಿಕೆಶಿ - Karavali Times ಸಿದ್ದು ಸರಕಾರ 99% ಭರವಸೆ ಈಡೇರಿಸಿದೆ : ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ನಳಿನ್ ಕಟೀಲ್ ಗೆ ಸವಾಲೆಸದೆದ ಡಿಕೆಶಿ - Karavali Times

728x90

15 July 2021

ಸಿದ್ದು ಸರಕಾರ 99% ಭರವಸೆ ಈಡೇರಿಸಿದೆ : ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ನಳಿನ್ ಕಟೀಲ್ ಗೆ ಸವಾಲೆಸದೆದ ಡಿಕೆಶಿ

ಬೆಂಗಳೂರು, ಜುಲೈ 15, 2021 (ಕರಾವಳಿ ಟೈಮ್ಸ್) : ಮಾಜಿ ಸಿಎಂ ಸಿದ್ಧರಾಮಯ್ಯ ಆಡಳಿತಾವಧಿಯಲ್ಲಿ ನುಡಿದಂತೆ ನಡೆದಿದ್ದಾರೆ. ಕೊಟ್ಟ ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿದ ಅವರು, ವಿಧಾನಸೌಧ ಪ್ರವೇಶ ಮಾಡಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ ಶೇ. 99 ರಷ್ಟು ಈಡೇರಿಸಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಳಿನ್ ಕುಮಾರ್ ಕಟೀಲ್ ಅವರಿಗೆ ಸವಾಲೆಸೆದಿದ್ದಾರೆ. 

ದಿನೇ ದಿನೇ ಹೆಚ್ಚಾಗುತ್ತಿರುವ ಇಂಧನ ದರ ಏರಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ಡಿಕೆಶಿ, ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರಗಳು ಸಂಪೂರ್ಣ ವಿಫಲವಾಗಿದ್ದು, ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಈಗಾಗಲೇ ಕಾಂಗ್ರೆಸ್ ಧರಣಿ ನಡೆಸಿ ಪ್ರತಿಭಟಿಸಿದರೂ ಕೇಂದ್ರ ಬಿಜೆಪಿ ಸರಕಾರ ತನ್ನ ಧೋರಣೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಟೀಕಿಸಿದ ಶಿವಕುಮಾರ್ ರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದರು. 

ರಾಜ್ಯ ಕಾಂಗ್ರೆಸ್ಸಿನಲ್ಲಿ ಮ್ಯಾಜಿಕ್ ಚೇರ್ ಆಟ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷರು, ಬಿಜೆಪಿಯಲ್ಲಿ ನಡೆಯುತ್ತಿರೋದು ಯಾವ ಆಟ. ಕಾಂಗ್ರೆಸ್‍ನಲ್ಲಿ ಮ್ಯಾಜಿಕ್ ಚೇರ್ ಆಟ ನಡೆಯುತ್ತಿದೆಯೋ ಅಥವಾ ಬೇರೆ ಯಾವುದೋ? ಆದಕ್ಕೂ ಮೊದಲು ಬಿಜೆಪಿಯಲ್ಲಿ ನಡೆಯುತ್ತಿದೆಯಲ್ಲ ಅದು ಯಾವ ಚೇರ್ ಆಟ? ಎಂಬುದನ್ನು ಕಟೀಲ್ ತಿಳಿಸಬೇಕು ಎಂದು ಕುಟುಕಿದರು. 

  • Blogger Comments
  • Facebook Comments

0 comments:

Post a Comment

Item Reviewed: ಸಿದ್ದು ಸರಕಾರ 99% ಭರವಸೆ ಈಡೇರಿಸಿದೆ : ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ನಳಿನ್ ಕಟೀಲ್ ಗೆ ಸವಾಲೆಸದೆದ ಡಿಕೆಶಿ Rating: 5 Reviewed By: karavali Times
Scroll to Top