ಪುತ್ತೂರು, ಜುಲೈ 23, 2021 (ಕರಾವಳಿ ಟೈಮ್ಸ್) : ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಪುತ್ತೂರು ನಗರ ಠಾಣಾ ಅಪರಾಧ ಕ್ರಮಾಂಕ 164/2000 ಕಲಂ : 143, 147, 148, 326, 504, 506 ಜೊತೆಗೆ 149 ಐಪಿಸಿ (ಎಲ್ಪಿಸಿ 05/2012) ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು, ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮಹಮ್ಮದ್ ಎಂಬವರ ಮಗ ಮಜೀದ್ (45) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಶುಕ್ರವಾರ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಗೂಡಿನಬಳಿಯಲ್ಲಿ ದಸ್ತಗಿರಿ ಮಾಡಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಮಜೀದ್ ಬಗ್ಗೆ ಸುಮಾರು 2 ವರ್ಷಗಳಿಂದ ಮಾಹಿತಿ ಸಂಗ್ರಹಿಸಲಾಗಿ ಬೆಂಗಳೂರು, ಕೋಲಾರ ಮೊದಲಾದೆಡೆ ವಾಸವಿದ್ದು, ನಂತರದ ದಿನಗಳಲ್ಲಿ ಈತನ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿ ಸುಮಾರು 3 ತಿಂಗಳಿನಿಂದ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಗೂಡಿನಬಳಿಯಲ್ಲಿ ವಾಸವಿರುವ ಬಗ್ಗೆ ಮಾಹಿತಿ ತಿಳಿದು ಬಂದ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಪುತ್ತೂರು ನಗರ ಠಾಣಾ ಎಚ್ ಸಿ ಗಳಾದ ಪರಮೇಶ್ವರ ಹಾಗೂ ಸುರೇಶ್ ಅವರು ಪುತ್ತೂರು ನಗರ ಠಾಣಾ ಎಸ್ಸೈ ಅವರ ಸೂಚನೆಯಂತೆ, ಜಿಲ್ಲಾ ಎಸ್ಪಿ ಹಾಗೂ ಪುತ್ತೂರು ಎಎಸ್ಪಿ ಅವರ ಮಾರ್ಗದರ್ಶನದಂತೆ ಶುಕ್ರವಾರ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
0 comments:
Post a Comment