ಮಂಗಳೂರು, ಆಗಸ್ಟ್ 29, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆವಿ ಅವರು ಶುಕ್ರವಾರ ಅಧಿಕೃತ ಆದೇಶ ನೀಡಿದ್ದಾರೆ.
ದ್ವಿತೀಯ ಪಿಯು ಭೌತಿಕ ತರಗತಿ ಆರಂಭಿಸುವಂತೆ ಗ್ರೀನ್ ಸಿಗ್ನಲ್ ನೀಡಿ ಡೀಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಮಾರ್ಗಸೂಚಿ ಪ್ರಕಾರ ಕೇರಳದಿಂದ ಬಂದು ಹಾಸ್ಟೆಲುಗಳಲ್ಲಿ ವಾಸವಾಗುವ ವಿದ್ಯಾರ್ಥಿಗಳಿಗೆ 7 ದಿನ ಕ್ವಾರೆಂಟೈನ್ ಮಾಡಲಾಗುತ್ತದೆ. ಕ್ವಾರೆಂಟೈನ್ ಮುಗಿದ ಬಳಿಕ ನೆಗೆಟಿವ್ ರಿಪೆÇೀರ್ಟ್ ಸಲ್ಲಿಸಿ ತರಗತಿಗೆ ಹಾಜರಾಗಬಹುದಾಗಿದೆ. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೆಗೆಟಿವ್ ರಿಪೆÇೀರ್ಟ್ ಜೊತೆ ತರಗತಿಗೆ ಹಾಜರಾಗಬಹುದು. ಕೇರಳದಿಂದ ದಿನನಿತ್ಯ ಬರುವ ವಿದ್ಯಾರ್ಥಿಗಳಿಗೆ 7 ದಿನಕ್ಕೊಮ್ಮೆ ನೆಗೆಟಿವ್ ರಿಪೆÇೀರ್ಟ್ ಕಡ್ಡಾಯವಾಗಿದೆ.
ವಸತಿ ನಿಲಯ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯು ತರಗತಿಗಳನ್ನು ಸೆ. 15 ರ ಬಳಿಕ ಆರಂಭಿಸಲು ಸೂಚಿಸಲಾಗಿದೆ.
ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಹೊರಿಸಲಾಗಿದೆ. ಕೇರಳದಿಂದ ಆಗಮಿಸುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕೂಡಾ ಪ್ರತಿ ತಿಂಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣಪತ್ರದೊಂದಿಗೆ ಹಾಜರಾಗಲು ಸೂಚಿಸಲಾಗಿದೆ.
ಎಸ್ಒಪಿಯನ್ನು ಅನುಸರಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಡಿಡಿಪಿಯು, ತಾಲೂಕು ಆರೋಗ್ಯಧಿಕಾರಿಗಳು ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
0 comments:
Post a Comment